‘ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವಂತಗೊಳಿಸಿದ್ದಕ್ಕಾಗಿ ಧನ್ಯವಾದಗಳು’; ಸ್ಟಾಲಿನ್ ಗೆ ನಟ ದಂಪತಿಗಳ ಅಭಿನಂದನೆ

Prasthutha|

ನಿನ್ನೆ 282 ಆದಿವಾಸಿಗಳಿಗೆ ಹಕ್ಕುಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ನೀಡಿದ್ದ ಮುಖ್ಯಮಂತ್ರಿ

- Advertisement -

ಚೆನ್ನೈ: ನಿನ್ನೆ ನರಿಕ್ಕುರವರ್ ಮತ್ತು ಇರುಳರ್ ಸೇರಿದಂತೆ 282 ಆದಿವಾಸಿಗಳಿಗೆ ಹಕ್ಕುಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ನೀಡಿದ್ದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರನ್ನು ನಟ ಸೂರ್ಯ ಮತ್ತು ಪತ್ನಿ ಜ್ಯೋತಿಕಾ ಅಭಿನಂದಿಸಿದ್ದಾರೆ.

ಮುಖ್ಯಮಂತ್ರಿ ಕೊಟ್ಟದ್ದು ಬರೀ ಹಕ್ಕುಪತ್ರವಲ್ಲ ದೊಡ್ಡ ಭರವಸೆ ಎಂದು ಸೂರ್ಯ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ. ಹಲವಾರು ವರ್ಷಗಳಿಂದ ಆದಿವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.

- Advertisement -

ಸ್ಟಾಲಿನ್ ಜನರ ಅಗತ್ಯತೆಗಳನ್ನು ಪೂರೈಸಲು ಸಾಧ್ಯವಿರುವ ಎಲ್ಲವನ್ನೂ ಮಾಡಿದ ವ್ಯಕ್ತಿ ಎಂದು ಸೂರ್ಯ ಅವರ ಪತ್ನಿ ಜ್ಯೋತಿಕಾ ಪ್ರತಿಕ್ರಿಯಿಸಿದ್ದಾರೆ.

‘ಇವು ನನ್ನ ಹೃದಯದಿಂದ ಬರುವ ಮಾತುಗಳು. ನ್ಯಾಯವು ಕ್ರಿಯೆಯಲ್ಲಿ ಸತ್ಯವಾಗಿದೆ. ನಿಮ್ಮ ಕಾರ್ಯಗಳಿಂದ ನೀವು ಅದನ್ನು ಸಾಬೀತುಪಡಿಸಿದ್ದೀರಿ. ಜನರ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸಿ ತ್ವರಿತವಾಗಿ ಕ್ರಮಕೈಗೊಳ್ಳುವ ಮೂಲಕ ನಾಯಕತ್ವ ಎನ್ನುವುದು ಕೇವಲ ಪದವಿಯಲ್ಲ ಎಂಬುದನ್ನು ನೀವು ಸಾಬೀತುಪಡಿಸಿದ್ದೀರಿ. ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವಂತಗೊಳಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿದ್ದಾರೆ.

Join Whatsapp