ಚುನಾವಣೋತ್ತರ ಸಮೀಕ್ಷೆಯ ಬಗ್ಗೆ ತಲೆಕೆಡಿಸಿಕೊಂಡಿಲ್ಲ; ಸಮಾಜವಾದಿ ಪಕ್ಷ 300 ಸ್ಥಾನ ಪಡೆಯಲಿದೆ: ಅಖಿಲೇಶ್ ಯಾದವ್

Prasthutha|

ಲಕ್ನೋ: ಸುದ್ದಿವಾಹಿನಿಗಳು ಪ್ರಕಟಿಸುತ್ತಿರುವ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಮಾರ್ಚ್ 10 ರಂದು ಪ್ರಕಟವಾಗಲಿರುವ ಫಲಿತಾಂಶದ ಬಳಿಕ ಆಡಳಿತರೂಢ ಬಿಜೆಪಿ ನಿರ್ನಾಮವಾಗಲಿದ್ದು, ಸಮಾಜವಾದಿ ಪಕ್ಷ 300 ಸ್ಥಾನಗಳನ್ನು ಪಡೆಯಲಿದೆ ಎಂದು ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದ್ದಾರೆ.

- Advertisement -

ಇತ್ತೀಚೆಗೆ ಪಂಜಾಬ್, ಉತ್ತರ ಪ್ರದೇಶ, ಮಣಿಪುರ, ಉತ್ತರಾಖಂಡ ಮತ್ತು ಗೋವಾ ಎಂಬ ಪಂಚರಾಜ್ಯಗಳಿಗೆ ನಡೆದ ಚುನಾವಣೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗುತ್ತಿವೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ ಎಂಬ ವರದಿ ಪ್ರಕಟವಾಗುತ್ತಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿ ಪ್ರೇರಿತ ಮಾಧ್ಯಮಗಳು ಬೇಕಾದುದನ್ನು ಪ್ರಕಟಿಸಲಿ, ಇದರ ಬಗ್ಗೆ ನಾವು ತಲೆಕೆಡಿಸಿಕೊಂಡಿಲ್ಲ. ಈ ಚುನಾವಣೆಯಲ್ಲಿ ನಮ್ಮ ಪಕ್ಷ 300 ಸ್ಥಾನಗಳನ್ನು ಪಡೆಯಲಿದ್ದೇವೆ ಎಂದು ಟಿವಿ ವಾಹಿನಿಗಳಿಗೆ ನೀಡಿದ್ದ ಸಂದರ್ಭದಲ್ಲಿ ಭವಿಷ್ಯ ನುಡಿದಿದ್ದಾರೆ.

- Advertisement -

ರಾಜ್ಯ ಅಸೆಂಬ್ಲಿಗೆ ನಡೆದ ಅಂತಿಮ ಸುತ್ತಿನ ಮತದಾನದ ಫಲಿತಾಂಶವನ್ನು ಸೇರಿಸಿ ಸೋಮವಾರ ಸಂಜೆಯ ವೇಳೆ ಹೊಸ ಸಮೀಕ್ಷೆಯು ಸಮಾಜವಾದಿ ಪಕ್ಷಕ್ಕೆ ಪೂರಕವಾಗಿ ಪ್ರಕಟವಾಗಲಿದ್ದು, 300 ಸ್ಥಾನಗಳೊಂದಿಗೆ ಎಸ್ಪಿ ಸರ್ಕಾರ ರಚಿಸಲಿದೆ ಎಂದು ಅಖಿಲೇಶ್ ಯಾದವ್ ತಿಳಿಸಿದ್ದಾರೆ.

Join Whatsapp