ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಕೊಲೆ ಎಂದ ಶವಾಗಾರದ ಸಿಬ್ಬಂದಿ

Prasthutha|

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅವರನ್ನು ಕೊಲೆ ಮಾಡಲಾಗಿತ್ತು ಎಂದು ಮುಂಬೈನ ಕೂಪರ್‌ ಆಸ್ಪತ್ರೆಯ ಶವಾಗಾರದ ಸಿಬ್ಬಂದಿ ರೂಪಕುಮಾರ್‌ ಶಾ ಹೇಳಿದ್ದಾರೆ.

- Advertisement -

ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿದ ರೂಪಕುಮಾರ್‌ ಶಾ, ನಾನು ಸುಶಾಂತ್ ಸಿಂಗ್ ರಜಪೂತ್ ಅವರ ಶವವನ್ನು ನೋಡಿದಾಗ ಅದು ಆತ್ಮಹತ್ಯೆ ಎಂದು ಅನಿಸುತ್ತಿರಲಿಲ್ಲ. ಅವರ ದೇಹದ ಮೇಲೆ ಇರುವ ಗಾಯದ ಗುರುತುಗಳ ಬಗ್ಗೆ ನನ್ನ ಹಿರಿಯ ಅಧಿಕಾರಿಗಳ ಬಳಿಗೆ ಹೋಗಿ ಹೇಳಿದ್ದೆ. ಆದರೆ, ಇದನ್ನು ಆಮೇಲೆ ಚರ್ಚೆ ಮಾಡೋಣ ಎಂದು ಹೇಳಿ ನನ್ನನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ನಟ ಸುಶಾಂತ್‌ ಸಿಂಗ್‌ ರಾಜಪೂತ್‌ ಅವರು 2020ರ ಜೂನ್ 14ರಂದು ಮುಂಬೈನ ತಮ್ಮ ಫ್ಲ್ಯಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಶವಪರೀಕ್ಷೆ ವರದಿಯಲ್ಲಿ ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿತ್ತು.

Join Whatsapp