ಸುರತ್ಕಲ್ ಫಾಝಿಲ್ ಹತ್ಯೆಯ ವರದಿ ತಿರುಚಿದ ಸುವರ್ಣ ನ್ಯೂಸ್ !

Prasthutha|

“ಸುವರ್ಣ ಟಿವಿ ವಿರುದ್ಧ ಮಾನನಷ್ಟ ಮೊಕದ್ದಮೆ” ಎಂದ ಮಾಜಿ ಶಾಸಕ

- Advertisement -

ಮಂಗಳೂರು:  ಲವ್ ವಿಷಯದಲ್ಲಿ 2ಗುಂಪುಗಳ ನಡುವೆ ಮಾರಾಮಾರಿ ನಡೆದು ಸುರತ್ಕಲ್’ನಲ್ಲಿ ಫಾಝಿಲ್ ಹತ್ಯೆ ನಡೆದಿದೆ ಎಂದು ಸುಳ್ಳು ಸುದ್ದಿ ವರದಿ ಮಾಡಿದ ಸುವರ್ಣ ನ್ಯೂಸ್

ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಮಾಜಿ ಶಾಸಕ ಮೊಯ್ದಿನ್ ಬಾವ  ಹೇಳಿದ್ದಾರೆ.

- Advertisement -

ಗುರುವಾರ ರಾತ್ರಿ ಫಾಝಿಲ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು, ಇದಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆ ಇನ್ನೂ ಆಗಿಲ್ಲ. ಆದರೆ ಸುವರ್ಣ ನ್ಯೂಸ್ ಆ ವರದಿಯನ್ನು ತಿರುಚಿ ಲವ್ ವಿಷಯದಲ್ಲಿ ಕೊಲೆಯಾಗಿದೆ ಎಂದು ಸುದ್ದಿ ಬಿತ್ತರಿಸಿದೆ.

ಅಲ್ಲದೆ, ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಸುವರ್ಣ ಟಿವಿ ವರದಿ ಬಿತ್ತರಿಸಿತ್ತು.

ಈ ಬಗ್ಗೆ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವ ನನ್ನ ಹೇಳಿಕೆ ತಿರುಚಿದ್ದಾರೆ. ಸುವರ್ಣ ಟಿವಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂರುತ್ತೇನೆ ಎಂದು ಹೇಳಿದ್ದಾರೆ.

ಲವ್ ಅಥವಾ ಇನ್ನಾವುದೇ ವಿಷಯಕ್ಕೆ ಕೊಲೆ ನಡೆದಿದೆ ಎಂಬುದು ಸುಳ್ಳು. ಈ ಬಗ್ಗೆ ಯಾರು ಕೂಡ ದೂರು ನೀಡಿಲ್ಲ. ಕೊಲೆಗೆ ನಿಖರ ಕಾರಣವನ್ನು ನಾವು ತನಿಖೆಯಿಂದ ಪತ್ತೆಯಾದ ಬಳಿಕ ಮಾಧ್ಯಮಗಳಿಗೆ ತಿಳಿಸುತ್ತೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

Join Whatsapp