ಹನುಮಂತನ ಜನ್ಮಸ್ಥಳ ವಿಚಾರಕ್ಕೆ ಸ್ವಾಮೀಜಿಗಳ ನಡುವೆ ಮಾರಾಮಾರಿ

Prasthutha|

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಲ್ಲಿ ಮಂಗಳವಾರ ಆಯೋಜಿಸಿದ್ದ ಹನುಮಂತನ ಜನ್ಮಸ್ಥಳ ವಿವಾದಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ವಾಮೀಜಿಗಳ ಎರಡು ಗುಂಪುಗಳ ನಡವೆ ಮಾರಾಮಾರಿ ನಡೆದಿದೆ.

- Advertisement -


ಆಧ್ಯಾತ್ಮಿಕ ನಾಯಕ ಕಿಷ್ಕಿಂಧೆ ಮಠಾಧಿಪತಿ ಸ್ವಾಮಿ ಗೋವಿಂದಾನಂದ ಸರಸ್ವತಿ ಅವರು ಇತ್ತೀಚೆಗೆ ಕಿಷ್ಕಿಂಧೆ(ಕರ್ನಾಟಕದ ಹಂಪಿ ಪ್ರದೇಶದಲ್ಲಿದೆ) ಭಗವಾನ್ ಹನುಮಂತನ ಜನ್ಮಸ್ಥಳವಾಗಿದೆ ಮತ್ತು ನಾಸಿಕ್ ಬಳಿಯ ಅಂಜನೇರಿ ಅಲ್ಲ ಎಂದು ಹೇಳಿದ್ದರು.
ಹೀಗಾಗಿ ಹನುಮಂತನ ನಿಜವಾದ ಜನ್ಮಸ್ಥಳ ಯಾವುದು ಎಂಬ ಬಗ್ಗೆ ತೀರ್ಮಾನ ಮಾಡಲು ನಾಸಿಕ್ ನಲ್ಲಿ ಹಿಂದೂ ಧಾರ್ಮಿಕ ಮುಖಂಡರ ಸಭೆ ‘ಧರ್ಮಸಭೆ’ ಕರೆಯಲಾಗಿತ್ತು.

ಸಭೆಯಲ್ಲಿ ಹಲವು ಸ್ವಾಮೀಜಿಗಳು ಕಿಷ್ಕಿಂದೆಯ ಗೋವಿಂದಾನಂದ ಸ್ವಾಮೀಜಿ ವಿರುದ್ಧ ಮುಗಿಬಿದ್ದಿದ್ದಾರೆ. ಹಿಂದೆ ರಾವಣ ಸೀತೆಯನ್ನು ಹೊತ್ತೊಯ್ದಿದ್ದ, ಆದರೆ ಈಗ ನೀವು ಹನುಮಂತನ ಜನ್ಮಸ್ಥಳವನ್ನೇ ಹೈಜಾಕ್ ಮಾಡುತ್ತಿದ್ದೀರಾ ಎಂದು ಆರೋಪಿಸಿದ್ದಾರೆ. ಇದಕ್ಕೆ ಗೋವಿಂದಾನಂದ ಸ್ವಾಮೀಜಿ ತಿರುಗೇಟು ನೀಡಿದ್ದಾರೆ.
ಈ ವೇಳೆ ಮಹಾಂತ ಸುಧೀರ್ ದಾಸರು, ಮೈಕ್ ಹಿಡಿದು ಹಲ್ಲೆ ಮಾಡಿದ್ದಾರೆ. ಇದರಿಂದ ಇನ್ನಷ್ಟು ಸಿಟ್ಟಿಗೆದ್ದ ಗೋವಿಂದಾನಂದ ಸ್ವಾಮೀಜಿ ಕೂಡ್ಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ.

Join Whatsapp