Home ಟಾಪ್ ಸುದ್ದಿಗಳು ರಾಹುಲ್ ಗಾಂಧಿಯ ಭಾರತೀಯ ಪೌರತ್ವ ರದ್ದುಪಡಿಸಲು ಕೋರ್ಟ್ ಮೆಟ್ಟಿಲೇರಿದ ಸ್ವಾಮಿ

ರಾಹುಲ್ ಗಾಂಧಿಯ ಭಾರತೀಯ ಪೌರತ್ವ ರದ್ದುಪಡಿಸಲು ಕೋರ್ಟ್ ಮೆಟ್ಟಿಲೇರಿದ ಸ್ವಾಮಿ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ರಾಹುಲ್ ಗಾಂಧಿಯವರ ಭಾರತೀಯ ಪೌರತ್ವವನ್ನು ರದ್ದುಪಡಿಸುವಂತೆ ಮನವಿ ಮಾಡಿದ್ದಾರೆ.

ರಾಹುಲ್ ಗಾಂಧಿ ತಮ್ಮದು ಬ್ರಿಟಿಷ್ ಪೌರತ್ವ ಅಂತ ದಾಖಲಿಸಿದ್ದಾರೆ ಅಂತ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. 2005 ಮತ್ತು 2006ರಲ್ಲಿ ಯುಕೆ ಮೂಲದ ಬ್ಯಾಕ್‌ಆಪ್ಸ್ ಲಿಮಿಟೆಡ್‌ನ ವಾರ್ಷಿಕ ರಿಟರ್ನ್ಸ್ ಸಲ್ಲಿಸಿದ ರಾಹುಲ್ ಗಾಂಧಿ ಅವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಘೋಷಿಸಿದ್ದಾರೆ ಎಂದು ಸ್ವಾಮಿ ಆರೋಪಿಸಿದ್ದಾರೆ.

ಫೆಬ್ರವರಿ 17, 2009 ರಂದು ಬ್ಯಾಕ್‌ಆಪ್ಸ್ ಲಿಮಿಟೆಡ್‌ನ ವಿಸರ್ಜನೆಯ ಅರ್ಜಿಯಲ್ಲಿ ಗಾಂಧಿಯವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷರು ಎಂದು ಘೋಷಿಸಲಾಗಿದೆ ಎಂದು ಸ್ವಾಮಿ ಆರೋಪಿಸಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ (ಎಂಎಚ್‌ಎ) ನಿರ್ದೇಶನ ನೀಡುವಂತೆ ಸುಬ್ರಮಣಿಯನ್ ಸ್ವಾಮಿ ಕೋರಿದ್ದಾರೆ.

Join Whatsapp
Exit mobile version