ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಕುಮಾರ್ ಅರ್ಜಿ

Prasthutha|

ನವದೆಹಲಿ: ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು ಕೋರ್ಟ್ ಮೆಟ್ಟಿಲೇರಿದ್ದಾರೆ.

- Advertisement -


ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ಇಂದೇ ಬಿಭವ್ ಕುಮಾರ್ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.


‘ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸಕ್ಕೆ ತೆರಳಿದ್ದಾಗ, ಅವರ ಕಾರ್ಯದರ್ಶಿಯಾಗಿರುವ ಬಿಭವ್ ಕುಮಾರ್ ತಮ್ಮ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ದೈಹಿಕವಾಗಿ ಹಲ್ಲೆ ನಡೆಸಿದ್ದರು’ ಎಂದು ಸಂಸದೆ ಸ್ವಾತಿ ಮಾಲಿವಾಲ್ ಅವರು ಆರೋಪಿಸಿದ್ದರು.

Join Whatsapp
Exit mobile version