Home ಟಾಪ್ ಸುದ್ದಿಗಳು T-20 | ಪಾಕಿಸ್ತಾನದ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ: ಯೋಗಿ ಎಚ್ಚರಿಕೆ

T-20 | ಪಾಕಿಸ್ತಾನದ ಜಯ ಸಂಭ್ರಮಿಸಿದರೆ ದೇಶದ್ರೋಹ ಪ್ರಕರಣ: ಯೋಗಿ ಎಚ್ಚರಿಕೆ

ಲಖನೌ: ಪಾಕ್ ಕ್ರಿಕೆಟ್ ತಂಡ ಜಯಗಳಿಸಿದ್ದಕ್ಕೆ ಸಂಭ್ರಮಾಚರಿಸಿದರೆ ದೇಶದ್ರೋಹ ಪ್ರಕರಣ ದಾಖಲಿಸಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಎಚ್ಚರಿಸಿದ್ದಾರೆ.


ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೋತ ನಂತರ ಕೆಲವರು ಪಾಕ್ ಜಯದ ಸಂಭ್ರಮಾಚರಣೆ ನಡೆಸಿದ್ದರು.


ಕ್ರಿಕೆಟ್ ಪಂದ್ಯಾವಳಿಯ ನಂತರ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಮತ್ತು ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕ ಮತ್ತು ಉತ್ತರ ಪ್ರದೇಶದ ಆಗ್ರಾದಲ್ಲಿ ಓದುತ್ತಿರುವ ಕಾಶ್ಮೀರದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಲಾಗಿದೆ.

Join Whatsapp
Exit mobile version