ಕುಕ್ಕರ್​ ಕಂಪೆನಿ ಮೇಲೆ ತಹಶೀಲ್ದಾರ್​ ದಾಳಿ| ಮತದಾರರಿಗೆ ಹಂಚಲು ಇಟ್ಟಿದ್ದ 2900 ಕುಕ್ಕರ್​ಗಳು ಜಪ್ತಿ

Prasthutha|

ರಾಮನಗರ: ತಾಲೂಕಿನ ಕರಿಕಲ್ ದೊಡ್ಡಿ ಬಳಿಯಿರುವ ಕುಕ್ಕರ್ ತಯಾರಿಕಾ ಕಂಪೆನಿ ಮೇಲೆ ತಹಶೀಲ್ದಾರ್​ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ಮಾಡಿದ್ದು, 2900 ಕುಕ್ಕರ್​ಗಳನ್ನು ಜಪ್ತಿ ಮಾಡಲಾಗಿದೆ.

- Advertisement -

ವಿಶ್ವಾಸ್ ವೈದ್ಯ ಎಂಬವರಿಗೆ ಸೇರಿದ ಕಂಪೆನಿಗೆ ದಾಳಿ ನಡೆಸಿದ ತಹಶೀಲ್ದಾರ್, ಸವದತ್ತಿ ಯಲ್ಲಮ್ಮ ಕ್ಷೇತ್ರದ ಮತದಾರರಿಗೆ ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿದ್ದ ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Join Whatsapp