ತೈಲ ಬೆಲೆ ಏರಿಕೆಗೆ ತಾಲಿಬಾನ್ ಕಾರಣ | ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್

Prasthutha|

ಧಾರವಾಡ : ಭಾರತದಲ್ಲಿ ತೈಲ ಬೆಲೆ ಏರಿಕೆಗೆ ತಾಲಿಬಾನ್‌ ಸಮಸ್ಯೆ ಕಾರಣ. ಇದರಿಂದಾಗಿ ಅನಿಲ ಬೆಲೆ ಏರಿಕೆಯಾಗಿದೆ” ಎಂದು ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ್‌ ಬೆಲ್ಲದ್‌ ತಿಳಿಸಿದ್ದಾರೆ.

- Advertisement -

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತಾಲಿಬಾನ್‌ ಸಮಸ್ಯೆಯ ಹಿನ್ನೆಲೆ ಅನಿಲ ಬೆಲೆ ಏರಿಕೆಯಾಗಿದೆ. ಕಚ್ಚಾ ತೈಲ ಕೂಡಾ ಬರುತ್ತಿಲ್ಲ. ಹಾಗಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಏಕೆ ಬೆಲೆ ಏರಿಕೆಯಾಗಿದೆ ಹಾಗೂ ಗ್ಯಾಸ್‌ ದರ ಏಕೆ ಹೆಚ್ಚಳವಾಗಿದೆ. ಈ ಬಗ್ಗೆ ಮತದಾರರಿಗೆ ಮಾಹಿತಿಯಿದ್ದು ಮತದಾರರೇ ವಿಚಾರ ಮಾಡಿ ಮತ ಹಾಕುತ್ತಾರೆ” ಎಂದಿದ್ದಾರೆ.

ಇನ್ನು ಈ ಬಾರಿ ಹುಬ್ಬಳ್ಳಿ, ಧಾರವಾಡ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಬಿಜೆಪಿಯ ಅಭಿವೃದ್ದಿಯನ್ನು ಗಮನಿಸಿ ಜನರು ಮತ ಹಾಕುತ್ತಾರೆ. ಈ ಹಿನ್ನೆಲೆ ಪಾಲಿಕೆ ಚುನಾವಣೆಯಲ್ಲಿ ನಾವು 55-60 ಸೀಟು ಗೆಲ್ಲುತ್ತೇವೆ. ಪಾಲಿಕೆಯಲ್ಲಿ ಈ ಬಾರಿ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತೇವೆ” ಎಂದು ತಿಳಿಸಿದ್ದಾರೆ.

Join Whatsapp