ಪರಿಷತ್ ಚುನಾವಣೆಯಲ್ಲಿ BJP ಬೆಂಬಲಿಸಲು JDS ಜೊತೆ ಮಾತುಕತೆ ನಡೆದಿದೆ : ಬಿಎಸ್ ವೈ

Prasthutha|

ಬೆಂಗಳೂರು : ವಿದಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲಿಸಬೇಕು ಎಂದು ಕೋರಿ ಜೆಡಿಎಸ್ ವರಿಷ್ಟ ಹೆಚ್‌ ಡಿ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಲಾಗಿದೆ ಎಂದು ಮಾಜಿ ಸಿಎಂ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

- Advertisement -

ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರಲ್ಲಿ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಕೇಳಿದ್ದೇನೆ. ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದ್ದು, ಅಲ್ಲಿ ಸ್ಪಷ್ಟಪಡಿಸಲಿದ್ದಾರೆ. ಎಲ್ಲೆಲ್ಲಿ ಅಭ್ಯರ್ಥಿಗಳಿಲ್ಲವೋ ಆ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಜೆಡಿಎಸ್‌ ಬೆಂಬಲಿಸುವ ವಿಶ್ವಾಸವಿದೆ” ಎಂದಿದ್ದಾರೆ.

“ಈ ಬಾರಿ ನಾವು ಪರಿಷತ್‌ ಚುನಾವಣೆಯಲ್ಲಿ 15ಕ್ಕೂ ಅಧಿಕ ಸೀಟ್‌ ಗೆಲ್ಲುತ್ತೇವೆ. ಬಿಜೆಪಿ ಬಗ್ಗೆ ಕಾಂಗ್ರೆಸ್‌ ಪಕ್ಷದವರು ಹಗುರವಾಗಿ ಮಾತನಾಡುತ್ತಿದ್ದಾರೆ. ನಾನು ಅವರ ಬಗ್ಗೆ ಏನೂ ಹೇಳುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಅದಕ್ಕೆ ಜನರೇ ಉತ್ತರಿಸಲಿದ್ದಾರೆ” ಎಂದು ಹೇಳಿದ್ದಾರೆ.

Join Whatsapp