ಮುಷ್ಕರನಿರತ ನಗರ ಸ್ಥಳೀಯ ಸಂಸ್ಥೆಗಳ ಗುತ್ತಿಗೆ ನೌಕರರೊಂದಿಗೆ ಮಾತುಕತೆ: ಸಿಎಂ ಬೊಮ್ಮಾಯಿ

Prasthutha|

ಚಿತ್ರದುರ್ಗ: ಮುಷ್ಕರ ನಿತರರಾಗಿರುವ ನಗರ ಸ್ಥಳೀಯ ಸಂಸ್ಥೆಗಳ ನೀರಗಂಟಿ ಹಾಗೂ ಸ್ವಚ್ಛತಾ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗುತ್ತಿಗೆ ನೌಕರರು ಮುಷ್ಕರ ಹೂಡಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅವರ ಸಮಸ್ಯೆಯನ್ನು ಅರಿತು ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಲಿದೆ ಎಂದು ಹೇಳಿದರು.
‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಾಗ ಪ್ರತಿಭಟನೆ ಮಾಡುವುದು ಸಹಜ. ಈಗ ಚುನಾವಣೆ ಸಮಯ, ಹಾಗಾಗಿ ಪ್ರತಿಭಟನೆ, ಮುಷ್ಕರ ಹೆಚ್ಚಾಗಿದೆ. ಇಂತಹ ಹೋರಾಟವನ್ನು ನಾವೂ ನೋಡುತ್ತಿದ್ದೇವೆ. ಚರ್ಚೆಯ ಮೂಲಕ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಲಿದ್ದೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Join Whatsapp