ಮೂವರು ಮಹಿಳೆಯರ ಮೇಲೆ ತಲ್ವಾರ್ ದಾಳಿ ಪ್ರಕರಣ: ಆರೋಪಿ ನವೀನ್ ಬಂಧನ

Prasthutha|

ಮಂಗಳೂರು: ಮೂವರು ಮಹಿಳೆಯರ ಮೇಲೆ ಅಪರಿಚಿತ ದುಷ್ಕರ್ಮಿ ತಲ್ವಾರ್ ದಾಳಿ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -


ಕುಂದಾಪುರ ನಿವಾಸಿ ನವೀನ್ ಎಂದು ಗುರುತಿಸಲಾಗಿದ್ದು, ಕುಂದಾಪುರ ನ್ಯಾಯಾಲಯದಲ್ಲಿ ಜವಾನನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.


ಪ್ರಾಥಮಿಕ ಮಾಹಿತಿ ಪ್ರಕಾರ ಉಪನ್ಯಾಸಕಿ ಒಬ್ಬರಿಗೆ ಗಿಫ್ಟ್ ಕೊಡಲಿದೆ ಎಂದು ಹೇಳಿ ಮಾತು ಆರಂಭಿಸಿ ನವೀನ್ ಏಕಾಏಕಿ ಚೀಲದಲ್ಲಿದ್ದ ಮಚ್ಚು ತೆಗೆದು ಸಿಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿದ್ದಾರೆ

Join Whatsapp