ತಮಿಳುನಾಡು | ರಥೋತ್ಸವದ ವೇಳೆ ವಿದ್ಯುತ್ ಆಘಾತ: ಮಕ್ಕಳು ಸೇರಿ ಒಟ್ಟು 11 ಬಲಿ

Prasthutha|

ತಮಿಳುನಾಡು: ಹೈವೋಲ್ಟೇಜ್ ವಿದ್ಯುತ್ ತಂತಿಯೊಂದು ರಥಕ್ಕೆ ತಗುಲಿದ ಪರಿಣಾಮ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು 11 ಮಂದಿ ಬಲಿಯಾಗಿರುವ ಘಟನೆ ತಂಜಾವೂರಿನಲ್ಲಿ ಕಳೆದ ರಾತ್ರಿ ನಡೆದಿದೆ.

- Advertisement -

ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಥೋತ್ಸವ ಮುಗಿಸಿ ದೇವಸ್ಥಾನಕ್ಕೆ ಹಿಂದಿರುಗುತ್ತಿದ್ದ ಸಂದರ್ಭ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೈ-ವೋಲ್ಟೇಜ್ ವಿದ್ಯುತ್ ತಂತಿಯೊಂದು ರಥಕ್ಕೆ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಬಂಡಿ ಹೊತ್ತಿ ಉರಿದಿದೆ. ರಥದ ಸಮೀಪವೇ ನಿಂತಿದ್ದ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ .

ಘಟನೆಗೆ ಸಂತಾಪ ಸೂಚಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೃತ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ,. ಪರಿಹಾರದ ಭರವಸೆ ನೀಡಿದ್ದಾರೆ.

Join Whatsapp