Home ಟಾಪ್ ಸುದ್ದಿಗಳು ತಮಿಳುನಾಡು | ರಥೋತ್ಸವದ ವೇಳೆ ವಿದ್ಯುತ್ ಆಘಾತ: ಮಕ್ಕಳು ಸೇರಿ ಒಟ್ಟು 11 ಬಲಿ

ತಮಿಳುನಾಡು | ರಥೋತ್ಸವದ ವೇಳೆ ವಿದ್ಯುತ್ ಆಘಾತ: ಮಕ್ಕಳು ಸೇರಿ ಒಟ್ಟು 11 ಬಲಿ

ತಮಿಳುನಾಡು: ಹೈವೋಲ್ಟೇಜ್ ವಿದ್ಯುತ್ ತಂತಿಯೊಂದು ರಥಕ್ಕೆ ತಗುಲಿದ ಪರಿಣಾಮ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಮೂವರು ಮಕ್ಕಳು ಸೇರಿದಂತೆ ಒಟ್ಟು 11 ಮಂದಿ ಬಲಿಯಾಗಿರುವ ಘಟನೆ ತಂಜಾವೂರಿನಲ್ಲಿ ಕಳೆದ ರಾತ್ರಿ ನಡೆದಿದೆ.

ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ರಥೋತ್ಸವ ಮುಗಿಸಿ ದೇವಸ್ಥಾನಕ್ಕೆ ಹಿಂದಿರುಗುತ್ತಿದ್ದ ಸಂದರ್ಭ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹೈ-ವೋಲ್ಟೇಜ್ ವಿದ್ಯುತ್ ತಂತಿಯೊಂದು ರಥಕ್ಕೆ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಬಂಡಿ ಹೊತ್ತಿ ಉರಿದಿದೆ. ರಥದ ಸಮೀಪವೇ ನಿಂತಿದ್ದ 11 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ .

ಘಟನೆಗೆ ಸಂತಾಪ ಸೂಚಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಮೃತ ಕುಟುಂಬಸ್ಥರಿಗೆ ತಲಾ 5ಲಕ್ಷ ರೂ,. ಪರಿಹಾರದ ಭರವಸೆ ನೀಡಿದ್ದಾರೆ.

Join Whatsapp
Exit mobile version