Home ಟಾಪ್ ಸುದ್ದಿಗಳು ವಯನಾಡ್ ದುರಂತ: ತಕ್ಷಣದ ಪರಿಹಾರ ಕಾರ್ಯಾಚರಣೆಗೆ ₹5 ಕೋಟಿ ನೀಡಿದ ತಮಿಳುನಾಡು

ವಯನಾಡ್ ದುರಂತ: ತಕ್ಷಣದ ಪರಿಹಾರ ಕಾರ್ಯಾಚರಣೆಗೆ ₹5 ಕೋಟಿ ನೀಡಿದ ತಮಿಳುನಾಡು

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿಯಲ್ಲಿ ಸಂಭವಿಸಿದ ಭಾರಿ ಮಳೆ ಹಾಗೂ ಭೂಕುಸಿತದಲ್ಲಿ ಸತ್ತವರ ಸಂಖ್ಯೆ 84ಕ್ಕೂ ಅಧಿಕ ಎಂದು ತಿಳಿದು ಬಂದಿದೆ. ಇನ್ನೊಂದೆಡೆ ಕೇರಳದಲ್ಲಿ ಸಂಭವಿಸಿದ ಈ ದುರಂತಕ್ಕೆ ನೆರೆಯ ಕರ್ನಾಟಕ ಈಗಾಗಲೇ ನೆರವಿನ ಹಸ್ತ ಚಾಚಿದೆ.


ಈ ಕುರಿತು ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಕೇರಳದ ಜೊತೆ ನಾವೂ ಇದ್ದೇವೆ ಅಗತ್ಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.


ಇಂದು ಬೆಳಿಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ಸ್ಟಾಲಿನ್, ಘಟನಾ ಸ್ಥಳಕ್ಕೆ ನಮ್ಮ ರಾಜ್ಯದಿಂದ ತುರ್ತು ರಕ್ಷಣಾ ಪಡೆಯನ್ನು ಕಳುಹಿಸಿ ಕೊಡಲಾಗುವುದು ಅಲ್ಲದೇ ಅಗತ್ಯ ಸಹಕಾರನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.


ಅಲ್ಲದೇ ಮೆಪ್ಪಾಡಿ ದುರಂತದ ತಕ್ಷಣದ ಪರಿಹಾರ ಕಾರ್ಯಾಚರಣೆಗೆ ₹5 ಕೋಟಿ ಬಿಡುಗಡೆ ಮಾಡಲು ಸಂಬಂಧಿಸಿದ ಅಧಿಕಾರಿಗೆ ಸ್ಟಾಲಿನ್ ಅವರು ಸೂಚಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

Join Whatsapp
Exit mobile version