ಕಾರ್ಯಕರ್ತರ ಮೇಲೆ ಕಲ್ಲೆಸೆದ ತಮಿಳುನಾಡು ಸಚಿವ!

Prasthutha|

ಕಾರ್ಯಕ್ರಮವೊಂದರಲ್ಲಿ ತನಗೆ ಕುರ್ಚಿ ತರಲು ತಡ ಮಾಡಿದ ಕಾರ್ಯಕರ್ತರ ವಿರುದ್ಧ ತಾಳ್ಮೆ ಕಳೆದುಕೊಂಡ ತಮಿಳುನಾಡಿನ ಸಚಿವರೊಬ್ಬರು ಕಲ್ಲೆಸೆದ ಘಟನೆ ತಿರುವಳ್ಳೂರಿನಲ್ಲಿ ನಡೆದಿದೆ.

- Advertisement -

ಈ ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಭಾರೀ ವೈರಲಾಗಿದೆ.

ಹಾಲು ಮತ್ತು ಡೈರಿ ಅಭಿವೃದ್ಧಿ ಸಚಿವ ಎಸ್‌ಎಂ ನಾಸರ್ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾಗವಹಿಸಲಿರುವ ಕಾರ್ಯಕ್ರಮದ ಬಗ್ಗೆ ವ್ಯವಸ್ಥೆಗಳನ್ನು ಪರಿಶೀಲಿಸುತ್ತಿದ್ದಾಗ ಕಾರ್ಯಕರ್ತರ ಮೇಲೆ ಕಲ್ಲು ಎಸೆದಿದ್ದಾರೆ.

- Advertisement -

ಪಕ್ಷದ ಕಾರ್ಯಕರ್ತರು ತನಗೆ ಕುರ್ಚಿ ತರಲು ತಡ ಮಾಡಿದ್ದಾರೆ ಎಂದು ಕೋಪಗೊಂಡ ಸಚಿವರು ಕಾರ್ಯಕರ್ತರ ಮೇಲೆ ಕಲ್ಲು ಎಸೆದಿದ್ದಾರೆ.



Join Whatsapp