ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ: ಶಾಸಕ ರವಿಕುಮಾರ್ ಸ್ಪೋಟಕ ಹೇಳಿಕೆ

Prasthutha|

ದಾವಣಗೆರೆ: ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ತೆಗೆದ ಟೀಂ ಮತ್ತೆ ಕೆಲಸ ಮಾಡುತ್ತಿದೆ. ಬೆಳಗ್ಗೆ ರೆಡಿಯಾಗಿ ಕಾಂಗ್ರೆಸ್ ಶಾಸಕರ ಮನೆಗೆ ಹೋಗುತ್ತಾರೆ. ಸ್ಪೆಷಲ್ ಫೈಟ್ ಮಾಡುತ್ತೇವೆ, ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಾರೆ. ಈ ಗ್ಯಾಂಗ್ ನಲ್ಲಿ ಬಿಎಸ್ ಯಡಿಯೂರಪ್ಪ ಪಿಎ ಆಗಿದ್ದ ಸಂತೋಷ್ ಸಹ ಇದ್ದಾರೆ ಎಂದು ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ ಮಾಡಿದ್ದಾರೆ.

- Advertisement -

ನಗರದಲ್ಲಿ ಮಾತನಾಡಿದ ಅವರು,’ನಮ್ಮ ಶಾಸಕರನ್ನು ಬನ್ನಿ ದೆಹಲಿಗೆ ವಿಶೇಷ ವಿಮಾನ ಮಾಡುತ್ತೇವೆ, ಅಮಿತ್ ಶಾ ಅವರನ್ನು ಭೇಟಿ ಮಾಡಿಸುತ್ತೇವೆ, ನಮ್ಮ ಬಳಿ ಸಾಕಷ್ಟು ಶಾಸಕರಿದ್ದಾರೆ ಎಂದು ಹೇಳಿಕೊಂಡು ಒಂದು ಗ್ಯಾಂಗ್ ಓಡಾಡುತ್ತಿದೆ. ನಮ್ಮ ನಾಲ್ಕು ಜನ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದಾರೆ. ಆ ಗ್ಯಾಂಗ್ನಲ್ಲಿ ಒಬ್ಬರು ಬಿಎಸ್ ಯಡಿಯೂರಪ್ಪ ಅವರ ಪಿಎ ಆಗಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ.

Join Whatsapp