ಉದಯಪುರ ಹತ್ಯಾ ಆರೋಪಿಗೆ ಬಿಜೆಪಿ ನಂಟು: ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್

Prasthutha|

ಪಾಟ್ನಾ: ರಾಜಸ್ತಾನದ ಉದಯಪುರದಲ್ಲಿ ಇತ್ತೀಚೆಗೆ ನಡೆದ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಆರೋಪಿ ರಿಯಾಝ್ ಅತ್ತಾರಿ ಎಂಬಾತನಿಗೆ ಬಿಜೆಪಿ ಜೊತೆ ನಂಟಿದೆ ಎಂದು ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್ ಅವರು ಗಂಭೀರವಾಗಿ ಆರೋಪಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿರುವ ಕೆಲವು ಫೋಟೋಗಳು ಆರೋಪಿಯ ಬಿಜೆಪಿ ನಾಯಕರ ಜೊತೆಗಿನ ಸಂಬಂಧವನ್ನು ಬಹಿರಂಗಪಡಿಸುತ್ತದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಯಕರೊಂದಿಗೆ ಹತ್ಯೆಯ ಆರೋಪಿ ರಿಯಾಝ್ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ತೇಜಸ್ವಿ ಯಾದವ್ ಈ ಮೇಲಿನ ಆರೋಪವನ್ನು ಮಾಡಿದ್ದಾರೆ.

- Advertisement -

ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಯಾವುದೇ ಹಂತಕ್ಕೆ ಹೋಗುತ್ತದೆ ಎಂದು ಅವರು ಮತ್ತೊಂದು ಟ್ವೀಟ್’ನಲ್ಲಿ ಕಿಡಿಕಾರಿದ್ದಾರೆ.

Join Whatsapp