ಟೆಕ್ಕಿ ಶಂಕಾಸ್ಪದ ಸಾವು

Prasthutha|

ಬೆಂಗಳೂರು:  ಸಾಫ್ಟ್‌ವೇರ್ ಇಂಜಿನಿಯರ್ ‌ ಒಬ್ಬರು  ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಪ್ರಶಾಂತ ನಗರದಲ್ಲಿ ನಡೆದಿದೆ.

- Advertisement -

ಪ್ರಶಾಂತ ನಗರದ ಮನೆಯ ಮೂರನೇ ಅಂತಸ್ತಿನ ಸ್ಟೋರ್ ರೂಂನಲ್ಲಿ  ಸಾಫ್ಟ್‌ವೇರ್ ಇಂಜಿನಿಯರ್ ನವ್ಯ (23) ಫ್ಯಾನಿಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.

ಮೃತಳ ಪೋಷಕರು‌ ಸಂಬಂಧಿಕರು ಪತಿ‌ ಚೇತನ್ ಹಾಗೂ ಅತ್ತೆ ಮಾವನ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ. ತಮ್ಮ ಮಗಳ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿ ತದನಂತರ ನೇಣು ಹಾಕಿದ್ದಾರೆ‌ ಎಂದು ಆರೋಪಿಸಿದ್ದಾರೆ.

- Advertisement -

ಸುದ್ದಿ ತಿಳಿದ ತಕ್ಷಣವೇ ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಪೊಲೀಸರು ಧಾವಿಸಿ  ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

ಬಾಗೇಪಲ್ಲಿ ತಾಲೂಕು ಸಡ್ಲವಾರಪಲ್ಲಿ ಗ್ರಾಮದ ನವ್ಯ ಹಾಗೂ ಚೇತನ್ ವಿವಾಹ ಕಳೆದ 1 ವರ್ಷದ ಹಿಂದೆ ನಡೆದಿದ್ದು, ವರದಕ್ಷಿಣೆ ಕಿರುಕುಳ,ಕೆಲಸದ ಒತ್ತಡ ಅಲ್ಲದೇ, ದಂಪತಿ ಮಧ್ಯೆ ಹೊಂದಾಣಿಕೆಯಿಲ್ಲದೇ ಕಳೆದ 6 ತಿಂಗಳಿಂದ ಕಲಹ ಉಂಟಾಗಿತ್ತು ಇದರಿಂದ ನೊಂದ‌ ನವ್ಯ‌  ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Join Whatsapp