Home ಟಾಪ್ ಸುದ್ದಿಗಳು ತೆಲಂಗಾಣ: ಬಿಜೆಪಿ ನಾಯಕ, ಮಾಜಿ ಸಂಸದ ಆನಂದ್ ಭಾಸ್ಕರ್ ರಾಜೀನಾಮೆ

ತೆಲಂಗಾಣ: ಬಿಜೆಪಿ ನಾಯಕ, ಮಾಜಿ ಸಂಸದ ಆನಂದ್ ಭಾಸ್ಕರ್ ರಾಜೀನಾಮೆ

ತೆಲಂಗಾಣ: ಬಿಜೆಪಿ ನಾಯಕ ಮತ್ತು ರಾಜ್ಯಸಭಾ ಮಾಜಿ ಸಂಸದ ಆನಂದ್ ಭಾಸ್ಕರ್ ರಾಪೋಲು ಅವರು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ತಮ್ಮನ್ನು ಕಡೆಗಣಿಸಲಾಗಿದೆ, ಅವಮಾನಿಸಲಾಗಿದೆ, ನಿರ್ಲಕ್ಷಿಸಲಾಗಿದೆ ಮತ್ತು ರಾಷ್ಟ್ರೀಯ ಹೊಣೆಯಿಂದ ಹೊರಗಿಡಲಾಗಿದೆ ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾನುವಾರ, ಆನಂದ್ ಭಾಸ್ಕರ್ ಅವರು TRS ಅಧ್ಯಕ್ಷ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಪ್ರಗತಿ ಭವನದಲ್ಲಿ ಭೇಟಿಯಾದರು. ಕೈಮಗ್ಗ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು ರಾಜ್ಯದ ನೇಕಾರರ ಕಲ್ಯಾಣಕ್ಕಾಗಿ ಸಿಎಂ ಹಲವಾರು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಆನಂದ್ ಭಾಸ್ಕರ್ ಹೇಳಿದರು. ಭಾರತೀಯ ರಾಷ್ಟ್ರ ಸಮಿತಿ (ಬಿಆರ್ ಎಸ್) ಮೂಲಕ ಸಿಎಂ ಕೆಸಿಆರ್ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಅವರು ಹೇಳಿದರು.

Join Whatsapp
Exit mobile version