ತೆಲಂಗಾಣ: ಬಿಜೆಪಿ ಮುಖಂಡನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Prasthutha|

ಹೈದರಾಬಾದ್: ಬಿಜೆಪಿ ಮುಖಂಡ ಜ್ಞಾನೇಂದ್ರ ಪ್ರಸಾದ್ ಅವರ ಮೃತದೇಹ ಅವರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

ಮಿಯಾಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸೋಮವಾರ ಬೆಳಿಗ್ಗೆ ಮಿಯಾಪುರ್ ಪೊಲೀಸರಿಗೆ ಮಾಹಿತಿ ದೊರೆತಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಅದು ಜ್ಞಾನೇಂದ್ರ ಪ್ರಸಾದ್ ಅವರ ಶವವಾಗಿತ್ತು ಎಂದು ತಿಳಿದುಬಂದಿದೆ.

“ತಕ್ಷಣವೇ ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಜ್ಞಾನೇಂದ್ರ ಪ್ರಸಾದ್ ಮನೆಯ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಅವರು ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್ ಹೌಸ್ ನಲ್ಲಿ ವಾಸಿಸುತ್ತಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ನಂತರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

174 ಸಿಆರ್ ಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಹೆಚ್ಚಿನ ತನಿಖೆಗಳು ನಡೆಯುತ್ತಿವೆ.



Join Whatsapp