ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷಕ್ಕೆ ಚಾಲನೆ : ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

Prasthutha|

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಭಾನುವಾರ ಘೋಷಿಸಿದ್ದಾರೆ.

- Advertisement -

“ತೆಲಂಗಾಣ ಚಳವಳಿ ಆರಂಭಕ್ಕೂ ಮುನ್ನ ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ ಚರ್ಚೆಯ ನಂತರ ಪರ್ಯಾಯ ರಾಷ್ಟ್ರೀಯ ಕಾರ್ಯಸೂಚಿಯ ಬಗ್ಗೆ ಒಮ್ಮತ ಮೂಡಿದೆ. ರಾಷ್ಟ್ರೀಯ ಪಕ್ಷದ ರಚನೆ ಮತ್ತು ಅದರ ನೀತಿಗಳನ್ನು ರೂಪಿಸುವ ಕೆಲಸ ನಡೆಯುತ್ತಿದೆ ” ಎಂದು ಕೆಸಿಆರ್ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಹಲವು ತಿಂಗಳುಗಳಿಂದ ಕೆಸಿಆರ್ ಅವರು ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಪಾತ್ರ ವಹಿಸಲು ಉತ್ಸುಕರಾಗಿದ್ದಾರೆ ಎಂಬ ಸುಳಿವನ್ನು ನೀಡುತ್ತಾ ಬಂದಿದ್ದಾರೆ. ಈ ವರ್ಷದ ಏಪ್ರಿಲ್ ನಲ್ಲಿ ನಡೆದ ಟಿಆರ್ ಎಸ್ ಸರ್ವಸದಸ್ಯರ ಸಭೆಯಲ್ಲಿ, ಬಿಜೆಪಿ ಮತ್ತು ಕಾಂಗ್ರೆಸ್ ಗೆ ರಾಷ್ಟ್ರೀಯ ಪರ್ಯಾಯದ ಅಗತ್ಯವಿದೆ. ತಮ್ಮ ಪಕ್ಷದ ಸಹೋದ್ಯೋಗಿಗಳು ರಾಷ್ಟ್ರೀಯ ಪಕ್ಷವನ್ನು ರಚಿಸಲು ಪ್ರೋತ್ಸಾಹಿಸುತ್ತಿದ್ದಾರೆ ಎಂದೂ ಕೆಸಿಆರ್ ಹೇಳಿದ್ದರು.

- Advertisement -

ಪಕ್ಷ ರಚನೆಯಾದ ನಂತರ, ರಾವ್ ಅವರು ಪಕ್ಷದ ಸಮಿತಿಗಳನ್ನು ರಚಿಸಲು ಮತ್ತು ರಾಜಕೀಯ ಚಟುವಟಿಕೆಗಳನ್ನು ಪ್ರಾರಂಭಿಸಲು ವಿವಿಧ ರಾಜ್ಯಗಳಿಗೆ ಭೇಟಿ ನೀಡುವ ನಿರೀಕ್ಷೆಯಿದ್ದು, ಬಿಜೆಪಿಯೇತರ ಪಕ್ಷಗಳ ನಾಯಕರ  ಭೇಟಿ ಮುಂದುವರಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಗುಜರಾತ್, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಪಕ್ಷವು ಪಾದಾರ್ಪಣೆ ಮಾಡಬಹುದು.  ಹೊಸ ಪಕ್ಷವು ವಿವಿಧ ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲಿದೆ ಎಂದು ಪಕ್ಷದ ಮೂಲಗಳು  ತಿಳಿಸಿವೆ.

Join Whatsapp