Home ಟಾಪ್ ಸುದ್ದಿಗಳು ED ವಿಚಾರಣೆಗೆ ಹಾಜರಾದ ತೆಲಂಗಾಣ ಸಿಎಂ ಪುತ್ರಿ ಕವಿತಾ

ED ವಿಚಾರಣೆಗೆ ಹಾಜರಾದ ತೆಲಂಗಾಣ ಸಿಎಂ ಪುತ್ರಿ ಕವಿತಾ

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ (ಬಿಆರ್’ಎಸ್) ವಿಧಾನ ಪರಿಷತ್ ಸದಸ್ಯ ಹಾಗೂ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕವಿತಾ ಕೆ ಅವರು ಶನಿವಾರ ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾದರು.


ತುಘಲಕ್ ರಸ್ತೆಯಲ್ಲಿರುವ ತನ್ನ ತಂದೆಯ ಅಧಿಕೃತ ನಿವಾಸದಿಂದ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇ.ಡಿ. ಪ್ರಧಾನ ಕಚೇರಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಅವರು ಆಗಮಿಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.


ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರೂ ದೆಹಲಿ ಪೊಲೀಸರು ಮತ್ತು ಕೇಂದ್ರ ಅರೆಸೈನಿಕ ಪಡೆಗಳ ಸಿಬ್ಬಂದಿ, ಇ.ಡಿ. ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ಅವರನ್ನು ತಡೆದರು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮಾರ್ಚ್ 9 ರಂದು ಹೇಳಿಕೆ ದಾಖಲಿಸಲು ಇಡಿ ಕವಿತಾ ಅವರಿಗೆ ಸಮನ್ಸ್ ನೀಡಿತ್ತು.

Join Whatsapp
Exit mobile version