ಬಿ.ಎಲ್ ಸಂತೋಷ್‌ಗೆ ಮತ್ತೊಮ್ಮೆ ನೋಟಿಸ್ ನೀಡಲು ಎಸ್‌ಐಟಿಗೆ ತೆಲಂಗಾಣ ಹೈಕೋರ್ಟ್‌ ಸೂಚನೆ

Prasthutha|

ಹೈದರಾಬಾದ್: ಭಾರತ ರಾಷ್ಟ್ರ ಸಮಿತಿಯ (ಬಿಆರ್‌ಎಸ್‌) ಶಾಸಕರನ್ನು ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ಅವರಿಗೆ ಮತ್ತೊಮ್ಮೆ ನೋಟಿಸ್‌ ನೀಡುವಂತೆ ತೆಲಂಗಾಣ ಹೈಕೋರ್ಟ್ ಎಸ್‌ಐಟಿಗೆ ಬುಧವಾರ ನಿರ್ದೇಶಿಸಿದೆ.

- Advertisement -

ವಿಚಾರಣೆಗಾಗಿ ನ.21ರಂದು ತನ್ನ ಮುಂದೆ ಹಾಜರಾಗುವಂತೆ ವಿಶೇಷ ತನಿಖಾ ತಂಡವು (ಎಸ್‌ಐಟಿ), ಸಂತೋಷ್ ಹಾಗೂ ಇತರರಿಗೆ ನೋಟಿಸ್‌ ಜಾರಿ ಮಾಡಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

‘ಎಸ್ಐಟಿ ಮುಂದೆ ಹಾಜರಾಗುವಂತೆ ಸಂತೋಷ್‌ ಅವರಿಗೆ ನೋಟಿಸ್‌ ನೀಡಲಾಗಿತ್ತು. ಪೂರ್ವನಿರ್ಧರಿತ ಪ್ರವಾಸ ಕಾರ್ಯಕ್ರಮಗಳಿಂದಾಗಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಅವರು ಕೇಳಿದ್ದರು’ ಎಂದು ತೆಲಂಗಾಣದ ಅಡ್ವೊಕೇಟ್ ಜನರಲ್ ಬಿ.ಎಸ್‌.ಪ್ರಸಾದ್‌ ಅವರು ಕೋರ್ಟ್‌ಗೆ ತಿಳಿಸಿದರು.

- Advertisement -

ವಾದ ಆಲಿಸಿದ ನ್ಯಾಯಮೂರ್ತಿಗಳು, ‘ಎಸ್ಐಟಿ ಮುಂದೆ ಹಾಜರಾಗಲು ಸಂತೋಷ್ ಅವರಿಗೆ ನ್ಯಾಯಸಮ್ಮತವಾದ ಕಾಲಾವಕಾಶ ಒದಗಿಸಿ, ಹೊಸದಾಗಿ ನೋಟಿಸ್‌ ಜಾರಿ ಮಾಡಿ’ ಎಂದು ಸೂಚಿಸಿ, ವಿಚಾರಣೆಯನ್ನು ನ. 29ಕ್ಕೆ ಮುಂದೂಡಿದರು.

Join Whatsapp