ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ !

Prasthutha|

ಬೆಂಗಳೂರು: ಕನ್ನಡ ಕಿರುತೆರೆ ನಟಿ ಸೌಜನ್ಯ(25) ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಸೌಜನ್ಯ ಕೊಡಗಿನ ಕುಶಾಲನಗರದ ಮೂಲದವರಾಗಿದ್ದು ಹಲವು ಧಾರಾವಾಹಿಗಳು ಮತ್ತು ‘ಚೌಕಟ್ಟು’ ಹಾಗೂ ‘ಫನ್’ ಸಿನೆಮಾಗಳಲ್ಲಿ ನಟಿಸಿದ್ದರು. 

ಕುಂಬಳಗೋಡಿನ ದೊಡ್ಡಬೆಲೆಯ ಸನ್ ವರ್ಥ್ ಅಪಾರ್ಟ್ ಮೆಂಟ್ ನಲ್ಲಿ ಕಳೆದ ಕೆಲ ಸಮಯಗಳಿಂದ ತಮ್ಮ ಬಾಯ್ ಫ್ರೆಂಡ್ ಜೊತೆ ವಾಸಿಸುತ್ತಿದ್ದರು. ಇಂದು ಬೆಳಗ್ಗೆ ಸ್ನೇಹಿತನಿಗೆ ತಿಂಡಿ ತೆಗೆದುಕೊಂಡು ಬಾ ಎಂದು ಹೇಳಿ ಕಳುಹಿಸಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

ಡೆತ್ ನೋಟ್ ನಲ್ಲಿ ತಾನು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಯಾರಲ್ಲಿಯೂ ಹೇಳಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಸಾಕಷ್ಟು ಚಿಕಿತ್ಸೆ ತೆಗೆದುಕೊಂಡರೂ ಕಡಿಮೆಯಾಗುತ್ತಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲು ತಮಗೆ ಇಷ್ಟವಿಲ್ಲದಿದ್ದರೂ ಬೇರೆ ದಾರಿ ತೋಚುತ್ತಿಲ್ಲ, ದಯವಿಟ್ಟು ಕ್ಷಮಿಸಿ ಎಂದು ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ.

Join Whatsapp