ದಕ್ಷಿಣ ಕನ್ನಡದ ಮಹಿಳೆಗೆ ಉಗ್ರರ ನಂಟು ಆರೋಪ | ಪತಿಯಿಂದ ಎಸ್ಪಿಗೆ ದೂರು

Prasthutha|

ಮಂಗಳೂರು : ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟು ಇದೆ ಎಂದು ಆರೋಪಿಸಿ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ ಕೆ.ಆರ್ ಎಂಬವರು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಗೆ ಹೆಂಡತಿ ವಿರುದ್ಧ ದೂರು ನೀಡಿದ್ದಾರೆ.

- Advertisement -

ನಾಪತ್ತೆಯಾಗಿರುವ ಮಹಿಳೆ ರಾಜಿ ರಾಘವನ್ ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದು .ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ನೇ ತಾರೀಕಿಗೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು, ತಮ್ಮದೊಂದು ಉಗ್ರ ಸಂಘಟನೆಯಿದೆ, ಅದಕ್ಕೆ ಸೇರಿಸಬೇಕೆಂದು ಒತ್ತಾಯಿಸುತ್ತಿದ್ದಾಳೆ.ಒಂದು ವೇಳೆ ಕಳುಹಿಸಿ ಕೊಡದಿದ್ದರೆ ಉಗ್ರ ಸಂಘಟನೆಯ ಮೂಲಕ ಶಿಕ್ಷೆ ಕೊಡಿಸುವುದಾಗಿಯೂ ಇದಕ್ಕೆ ಆಕೆಯ ಅಕ್ಕನ ಕುಮ್ಮಕ್ಕಿದೆ ಎಂದು ಆರೋಪಿಸಿದ್ದಾರೆ.

ಇನ್ನು ಈ ಬಗ್ಗೆ ಲಕ್ಷದ್ವೀಪದಿಂದ ಓರ್ವ ವ್ಯಕ್ತಿ ತನಗೆ ಕರೆ ಮಾಡಿ, ನಿನ್ನ ಮಗಳು ಹಾಗೂ ಹೆಂಡತಿಯನ್ನು ನಮ್ಮೊಂದಿಗೆ ಕಳುಹಿಸಿಕೊಡಬೇಕು. ಇಲ್ಲದಿದ್ದಲ್ಲಿ ನಾವು ಬಂದು ಕರೆದೊಯ್ಯುತ್ತೇವೆ. ಇಬ್ಬರನ್ನೂ ದುಬೈಗೆ ಕಳುಹಿಸಿಕೊಡಬೇಕೆಂದು ಆತ ಒತ್ತಡ ಹಾಕುತ್ತಿದ್ದಾನೆ ಎಂದು ಚಿದಾನಂದ ಆರೋಪಿಸಿದ್ದಾರೆ.

Join Whatsapp