ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ತೆಗೆದುಕೊಂಡು ಹೋಗುವಂತೆ ಕರೆ ಮಾಡಿದ ಥಾಣೆ ಪಾಲಿಕೆ!

Prasthutha|

ಥಾಣೆ: ಮರಣ ಪ್ರಮಾಣ ಪತ್ರ ತೆಗೆದುಕೊಂಡು ಹೋಗಲು ಬದುಕಿದ್ದ ವ್ಯಕ್ತಿಗೇ ಅಧಿಕಾರಿಗಳು ಕರೆ ಮಾಡಿ ಹೇಳಿದ ವಿಚಿತ್ರ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ವರದಿಯಾಗಿದೆ.
ಥಾಣೆ ಮುನ್ಸಿಪಾಲ್​ ಕಾರ್ಪೋರೇಷನ್​ ಅಧಿಕಾರಿಯೊಬ್ಬರು ಕರೆ ಮಾಡಿ ನಿಮ್ಮ ಮರಣ ಪ್ರಮಾಣ ಪತ್ರ ಕಚೇರಿಗೆ ಬಂದಿದೆ. ಕೂಡಲೇ ಬಂದು ತೆಗೆದುಕೊಂಡು ಹೋಗಿ ಎಂದು ಹೇಳಿರುವುದಾಗಿ ಚಂದ್ರಶೇಖರ್​ ದೇಸಾಯಿ ಆರೋಪ ಮಾಡಿದ್ದಾರೆ.

- Advertisement -

ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದಂತೆಯೇ ಪ್ರತಿಕ್ರಿಯೆ ನೀಡಿದ ಉಪ ಕಮಿಷನರ್​ ಸಂದೀಪ್​ ಮಾಲ್ವಿ, ಇದೊಂದು ತಾಂತ್ರಿಕ ದೋಷವಾಗಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಲಿಸ್ಟ್​ನ್ನು ತಯಾರು ಮಾಡಿದ್ದು ನಾವಲ್ಲ. ನಮಗೆ ಈ ಲಿಸ್ಟ್​ ಪುಣೆ ಕಚೇರಿಯಿಂದ ಬಂದಿತ್ತು. ತಾಂತ್ರಿಕ ದೋಷದಿಂದಾಗಿ ಈ ವ್ಯಕ್ತಿಯ ಹೆಸರೂ ಸಹ ಮೃತರ ಪಟ್ಟಿಯಲ್ಲಿ ಸೇರಿಕೊಂಡಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ತಾಂತ್ರಿಕ ದೋಷ ಸರಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Join Whatsapp