ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ‌ ಕೇಂದ್ರ ಸಚಿವೆಗೆ ಧನ್ಯವಾದ: ಡಿ.ಕೆ. ಶಿವಕುಮಾರ್

Prasthutha|

ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

- Advertisement -

ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಅಕ್ಷಮ್ಯ ಅಪರಾಧದ ಬಗ್ಗೆ ಜನರಿಗೂ ಅರಿವಾಗಿದೆ. ಈ ಮೂಲಕ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ,ಅವರಿಗೆ ಧನ್ಯವಾದಗಳು ಎಂದು ಡಿಸಿಎಂ ತಿರುಗೇಟು ನೀಡಿದ್ದಾರೆ.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು ಎಂದರು.

Join Whatsapp