ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆ; ಅರ್ಧಕ್ಕೆ ನಿಂತ ವಿದ್ಯಾರ್ಥಿಗಳ ಅಧ್ಯಯನ; ಸುಪ್ರೀಂ ಕೋರ್ಟ್ ನಿಂದ ಕೇಂದ್ರಕ್ಕೆ ನೋಟಿಸ್

Prasthutha|

ನವದೆಹಲಿ: ಭಾರತದಲ್ಲಿ ವೈದ್ಯಕೀಯ ಅಧ್ಯಯನವನ್ನು ಮುಂದುವರಿಸಲು ಅನುಮತಿ ಕೋರಿ ಉಕ್ರೇನ್ ನಿಂದ  ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

- Advertisement -

ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ಪೀಠವು ಅರ್ಜಿಯ ಬಗ್ಗೆ ನೋಟಿಸ್ ಜಾರಿ ಮಾಡಿ ಸೆಪ್ಟೆಂಬರ್ ನಲ್ಲಿ ಈ ವಿಷಯವನ್ನು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ರಷ್ಯಾ-ಉಕ್ರೇನ್ ಯುದ್ಧ ಬಿಕ್ಕಟ್ಟಿನಿಂದಾಗಿ ತಮ್ಮ ಶಿಕ್ಷಣವನ್ನು ಭಾರತದಲ್ಲಿ ಮುಂದುವರೆಸಲು ತುರ್ತು ಪರಿಸ್ಥಿತಿಯನ್ನು  ಕೋರಿ ಸ್ಥಳಾಂತರಿಸಲ್ಪಟ್ಟ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಉಕ್ರೇನ್ ನ ಬಿಕ್ಕಟ್ಟಿನಿಂದಾಗಿ ಸ್ಥಳಾಂತರಗೊಂಡಿದ್ದರಿಂದ ವಿದ್ಯಾರ್ಥಿಗಳ ಶಿಕ್ಷಣವು ಅರ್ಧಕ್ಕೆ ನಿಂತಿದೆ.

Join Whatsapp