ಬಿಜೆಪಿಗೆ ಕೇಜ್ರಿವಾಲ್ ರನ್ನು ಸೋಲಿಸಲು ಸಾಧ್ಯವಿಲ್ಲ; ಆದ್ದರಿಂದ ಕೊಲ್ಲಲು ಯತ್ನಿಸುತ್ತಿದೆ: ಮನೀಶ್ ಸಿಸೋಡಿಯಾ

Prasthutha|

ಹೊಸದಿಲ್ಲಿ: ಬಿಜೆಪಿಗೆ ಕೇಜ್ರಿವಾಲ್ ಅವರನ್ನು ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಅವರನ್ನು “ಕೊಲ್ಲಲು ಯತ್ನಿಸುತ್ತಿದೆ” ಎಂದು ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

- Advertisement -

ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಕುರಿತು  ಕೇಜ್ರಿವಾಲ್ ಅವರ ವ್ಯಂಗ್ಯಾತ್ಮಕ ಮಾತುಗಳು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ವನ್ನು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು.

- Advertisement -

ಈ ಘರ್ಷಣೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ‘ರಾಜಕೀಯವು ಕೇವಲ ಕಾರಣವಷ್ಟೇ, ಇದು ಸ್ಪಷ್ಟ ಕ್ರಿಮಿನಲ್ ಪ್ರಕರಣವಾಗಿದೆ’ ಎಂದು ಹೇಳಿದರು.

Join Whatsapp