Home ಟಾಪ್ ಸುದ್ದಿಗಳು ಬಿಜೆಪಿಗೆ ಕೇಜ್ರಿವಾಲ್ ರನ್ನು ಸೋಲಿಸಲು ಸಾಧ್ಯವಿಲ್ಲ; ಆದ್ದರಿಂದ ಕೊಲ್ಲಲು ಯತ್ನಿಸುತ್ತಿದೆ: ಮನೀಶ್ ಸಿಸೋಡಿಯಾ

ಬಿಜೆಪಿಗೆ ಕೇಜ್ರಿವಾಲ್ ರನ್ನು ಸೋಲಿಸಲು ಸಾಧ್ಯವಿಲ್ಲ; ಆದ್ದರಿಂದ ಕೊಲ್ಲಲು ಯತ್ನಿಸುತ್ತಿದೆ: ಮನೀಶ್ ಸಿಸೋಡಿಯಾ

ಹೊಸದಿಲ್ಲಿ: ಬಿಜೆಪಿಗೆ ಕೇಜ್ರಿವಾಲ್ ಅವರನ್ನು ಅವರನ್ನು ಚುನಾವಣೆಯಲ್ಲಿ ಸೋಲಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಅವರನ್ನು “ಕೊಲ್ಲಲು ಯತ್ನಿಸುತ್ತಿದೆ” ಎಂದು ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರದ ಕುರಿತು  ಕೇಜ್ರಿವಾಲ್ ಅವರ ವ್ಯಂಗ್ಯಾತ್ಮಕ ಮಾತುಗಳು ಬಿಜೆಪಿ ಕಾರ್ಯಕರ್ತರನ್ನು ಕೆರಳಿಸಿತ್ತು. ಈ ಹಿನ್ನೆಲೆಯಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ವನ್ನು ಕೇಜ್ರಿವಾಲ್ ಲೇವಡಿ ಮಾಡಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಬಿಜೆಪಿ ಕಾರ್ಯಕರ್ತರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು.

ಈ ಘರ್ಷಣೆಯ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಶ್ ಸಿಸೋಡಿಯಾ, ‘ರಾಜಕೀಯವು ಕೇವಲ ಕಾರಣವಷ್ಟೇ, ಇದು ಸ್ಪಷ್ಟ ಕ್ರಿಮಿನಲ್ ಪ್ರಕರಣವಾಗಿದೆ’ ಎಂದು ಹೇಳಿದರು.

Join Whatsapp
Exit mobile version