ಬ್ರಿಟಿಷರ ಕಾಲದ ದೇಶದ್ರೋಹದ ಕಾನೂನನ್ನು ಬಿಜೆಪಿ ತನ್ನ ವಿರೋಧಿಗಳ ಮೇಲೆ ಪ್ರಯೋಗಿಸಿದೆ: ಬಿ.ಕೆ. ಹರಿಪ್ರಸಾದ್ ಕಿಡಿ

Prasthutha|

ಬೆಂಗಳೂರು: ಬ್ರಿಟಿಷರ ಕಾಲದಲ್ಲಿ ಅಸ್ತಿತ್ವದಲ್ಲಿದ ದೇಶದ್ರೋಹದ ಕಾನೂನನ್ನು ಬಿಜೆಪಿ ಪಕ್ಷವು ತನ್ನ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಿ ಪ್ರಯೋಗ ಮಾಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಕಿಡಿಕಾರಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬ್ರಿಟಿಷರ ಕಾಲದ ದೇಶದ ಕಾನೂನನ್ನು ಬೇರೆ ಯಾವ ಸರ್ಕಾರವೂ ದುರುಪಯೋಗಪಡಿಸಿಕೊಂಡಿಲ್ಲ. ಬಿಜೆಪಿಯು ತಮ್ಮ ರಾಜಕೀಯ ವಿರೋಧಿಗಳನ್ನು ಗುರಿಯಾಗಿಸಿಕೊಂಡು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಶಾರ್ಜೀಲ್ ಇಮಾಮ್ ನಿಂದ ಹಿಡಿದು ದಿಶಾ ರವಿವರೆಗೆ ಹಲವು ಪ್ರಕರಣಗಳು ರಾಜಕೀಯ ಪ್ರೇರಿತವಾಗಿದ್ದು, ಅವರನ್ನು ಬಲಿಪಶು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಸದ್ಯ ದೇಶದ್ರೋಹದ ಕಾನೂನನ್ನು ಮರುಪರಿಶೀಲಿಸುವುದು ಸ್ವಾಗತಾರ್ಹ ಮತ್ತು ಸರ್ಕಾರದ ದುರುಪಯೋಗವನ್ನು ತಡೆಯಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

Join Whatsapp