ಎಂ ಎಸ್ ಬಿಲ್ಡಿಂಗ್ ನ ಸಂಪ್ ನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

Prasthutha|

ಬೆಂಗಳೂರು: ವಿಧಾನ ಸೌಧದ ಸನಿಹದಲ್ಲೇ ಇರುವ ಸಚಿವಾಲಯದ ವ್ಯಾಪ್ತಿಯ ಎಂ. ಎಸ್. ಬಿಲ್ಡಿಂಗ್ ನ ಅಗ್ನಿಶಾಮಕ ವಾಹನಗಳಿಗೆ ನೀರು ತುಂಬಿಸುವ ಸಂಪ್ ನಲ್ಲಿ ಕೊಲೆಗೈದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

- Advertisement -


ಪತ್ತೆಯಾಗಿರುವ ಮೃತದೇಹವು ಸುಮಾರು 35 ವರ್ಷದ ವ್ಯಕ್ತಿಯದ್ದಾಗಿದೆ.


ಆದರೆ ಮೃತ ವ್ಯಕ್ತಿಯ ದೇಹದ ಮೇಲೆ ಯಾವುದೇ ಗುರುತು ಪತ್ತೆಯಾಗಿಲ್ಲ. ಕೊಲೆ ಮಾಡಿ ಸಂಪ್ ಗೆ ಹಾಕಿರುವ ಶಂಕೆ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ವಿಧಾನಸೌಧ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

- Advertisement -


ಹಲವು ಮಂದಿ ನೀರು ತುಂಬಿಸಲು ಇಲ್ಲಿಗೆ ಬರುತ್ತಾರೆ. ಮೃತದೇಹ ಯಾರದ್ದು ಎನ್ನುವುದನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗುವುದು ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಮೈ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ, ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ಕಾರಣ ತಿಳಿಯಲಿದ್ದು ಎಲ್ಲಾ ಆಯಾಮದಲ್ಲೂ ತನಿಖೆ ಮಾಡಲಾಗುವುದು ಎಂದರು.

Join Whatsapp