Home ಟಾಪ್ ಸುದ್ದಿಗಳು ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲು

ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲು

ರಾಯಚೂರು: ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ.


ಜೇಗರ್ ಕಲ್ ಮಲ್ಲಾಪೂರು ಗ್ರಾಮದ ವಿನಾಯಕ (10) ಮೃತ ಬಾಲಕ.


ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದ. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದ. ಈಜು ಬಾರದ ಹಿನ್ನೆಲೆ ನೀರುಪಾಲಾಗಿದ್ದಾನೆ.


ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Join Whatsapp
Exit mobile version