ಮಳೆ-ಗಾಳಿಗೆ ನಿಯಂತ್ರಣ ತಪ್ಪಿದ ಕಾರು ಹೇಮಾವತಿ ನದಿ ದಡಕ್ಕೆ…!

Prasthutha|

ಮೂಡಿಗೆರೆ: ಮಳೆ-ಗಾಳಿಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನದಿಯ ದಡಕ್ಕೆ ಹೋಗಿ ನಿಂತ ಘಟನೆ ತಾಲೂಕಿನ ಬಣಕಲ್ ಸಮೀಪ ಸೋಮವಾರ ನಡೆದಿದೆ.

- Advertisement -

ಕೊಟ್ಟಿಗೆಹಾರದಿಂದ ಮೂಡಿಗೆರೆಗೆ ಹೋಗುತ್ತಿದ್ದ ಬಿಜೆಪಿ ಮುಖಂಡ ತರುವೆ ಆದರ್ಶ್ ರಾಷ್ಟ್ರೀಯ ಹೆದ್ದಾರಿ 173ರ ತಿರುವಿನಲ್ಲಿ ಮಳೆ ಹಾಗೂ ಗಾಳಿಗೆ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ.ಕಾರು ಮತ್ತಷ್ಟು ಸ್ವಲ್ಪ ಮುಂದೆ ಹೋಗಿದ್ದರೆ ನದಿಯಲ್ಲಿ ಮುಳುಗುತ್ತಿತ್ತು. ಅದೃಷ್ಟವಶಾತ್ ಕಾರಿನ ಚಾಲಕ ಆದರ್ಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಲೆನಾಡಿನಲ್ಲಿ ಗಾಳಿ-ಮಳೆಯ  ಅಬ್ಬರ ಮುಂದುವರೆದಿದ್ದು ಚಾರ್ಮಾಡಿ ಘಾಟಿಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಒಂದು ಕಾರಿನಲ್ಲಿ ನಾಲ್ವರು, ಮತ್ತೊಂದು ಕಾರಿನಲ್ಲಿ ಇಬ್ಬರು ಇದ್ದು ಯಾವುದೇ ಅನಾಹುತ ಸಂಭವಿಸಿಲ್ಲ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp