ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸಿದ ಪ್ರಕರಣ; ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲು

Prasthutha|

ಧಾರವಾಡ: ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಬಳಿ  ಮುಸ್ಲಿಮರ  ಅಂಗಡಿಗಳನ್ನು ಶ್ರೀರಾಮಸೇನೆಯ ಕಾರ್ಯಕರ್ತರು ಬಲವಂತವಾಗಿ ತೆರವುಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಧಾರವಾಡ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ನಾಲ್ಕು ಅಂಗಡಿಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ತೆರವುಗೊಳಿಸಿದ್ದಲ್ಲದೆ ಕಲ್ಲಂಗಡಿ ಹಣ್ಣಿನ ವ್ಯಾಪಾರಿಯ ಗಾಡಿಯನ್ನು ಧ್ವಂಸಗೊಳಿಸಿ ಅದರಲ್ಲಿದ್ದ ಕಲ್ಲಂಗಡಿಗಳನ್ನು ರಸ್ತೆಗೆಸೆದು ನಾಶಪಡಿಸಿದ್ದರು.

ಈ ಬಗ್ಗೆ ಕಲ್ಲಂಗಡಿ ಹಣ್ಣಿನ ವ್ಯಾಪಾರಿ ನಬಿಸಾಬ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಅನ್ವಯ ಪೊಲೀಸರು  ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

Join Whatsapp