Home ಟಾಪ್ ಸುದ್ದಿಗಳು ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸಿದ ಪ್ರಕರಣ; ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲು

ಮುಸ್ಲಿಂ ವ್ಯಾಪಾರಿಗಳ ಅಂಗಡಿ ತೆರವುಗೊಳಿಸಿದ ಪ್ರಕರಣ; ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲು

ಧಾರವಾಡ: ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಬಳಿ  ಮುಸ್ಲಿಮರ  ಅಂಗಡಿಗಳನ್ನು ಶ್ರೀರಾಮಸೇನೆಯ ಕಾರ್ಯಕರ್ತರು ಬಲವಂತವಾಗಿ ತೆರವುಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಧಾರವಾಡ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹನುಮಂತ ದೇವಸ್ಥಾನದ ಆವರಣದಲ್ಲಿದ್ದ ನಾಲ್ಕು ಅಂಗಡಿಗಳನ್ನು ಶ್ರೀ ರಾಮ ಸೇನೆ ಕಾರ್ಯಕರ್ತರು ತೆರವುಗೊಳಿಸಿದ್ದಲ್ಲದೆ ಕಲ್ಲಂಗಡಿ ಹಣ್ಣಿನ ವ್ಯಾಪಾರಿಯ ಗಾಡಿಯನ್ನು ಧ್ವಂಸಗೊಳಿಸಿ ಅದರಲ್ಲಿದ್ದ ಕಲ್ಲಂಗಡಿಗಳನ್ನು ರಸ್ತೆಗೆಸೆದು ನಾಶಪಡಿಸಿದ್ದರು.

ಈ ಬಗ್ಗೆ ಕಲ್ಲಂಗಡಿ ಹಣ್ಣಿನ ವ್ಯಾಪಾರಿ ನಬಿಸಾಬ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಅನ್ವಯ ಪೊಲೀಸರು  ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version