Home ಟಾಪ್ ಸುದ್ದಿಗಳು ತಮ್ಮ ಬೀದಿಗೆ ಪಾನಿಪುರಿ ತಿನ್ನಲು ಬಂದ ದಲಿತರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಸವರ್ಣೀಯರು

ತಮ್ಮ ಬೀದಿಗೆ ಪಾನಿಪುರಿ ತಿನ್ನಲು ಬಂದ ದಲಿತರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಸವರ್ಣೀಯರು

ಗಾಯಾಳು ಪ್ರಸನ್ನ

ಮೈಸೂರು: ತಮ್ಮ ಬೀದಿಗೆ ಪಾನಿಪುರಿ ತಿನ್ನಲು ಬಂದ ದಲಿತ ಯುವಕರಿಗೆ ಮೇಲ್ವರ್ಗದ ತಂಡವೊಂದು ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರು ತಾಲೂಕು ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ನಡೆದಿದೆ.

ಹಲ್ಲೆಯಿಂದಾಗಿ ದಲಿತ ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಆರು ಮಂದಿ ಆರೋಪಿಗಳನ್ನು ದಲಿತ ದೌರ್ಜನ್ಯ ಪ್ರಕರಣದಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಅರಸಿನಕೆರೆ ಗ್ರಾಮದ ನಿವಾಸಿಗಳಾದ ಮೂರ್ತಿ, ಸಚಿನ್, ನವೀನ್, ಚಂದನ್, ಮಹದೇವಸ್ವಾಮಿ ಮತ್ತು ಸಂತೋಷ್ ಎಂದು ಗುರುತಿಸಲಾಗಿದೆ.

ದಲಿತ ಯುವಕ ಪ್ರಸನ್ನ ಎಂಬಾತ, ಪಾನಿಪುರಿ ತಿಂದು ಪ್ಲೇಟ್ ಅನ್ನು ಡಸ್ಟ್ ಬಿನ್ ಗೆ ಹಾಕಲಿಲ್ಲ ಎಂಬುದನ್ನೇ ನೆಪವಾಗಿಟ್ಟು ಮೇಲ್ವರ್ಗದ ವ್ಯಕ್ತಿಯೋರ್ವ ಪ್ರಶ್ನಿಸಿದ್ದು, ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಇದಾದ ನಂತರ ಸವರ್ಣೀಯರ ತಂಡವೊಂದು ದಲಿತರ ಬೀದಿಯಲ್ಲಿರುವ ಪ್ರಸನ್ನರ ಮನೆಗೆ ನುಗ್ಗಿ ಪ್ರಸನ್ನ ಸಹಿತ ನಾಲ್ವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದೆ. ಗಾಯಾಳುಗಳನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Join Whatsapp
Exit mobile version