Home ಟಾಪ್ ಸುದ್ದಿಗಳು ಕೊರೊನಾ ಹೆಚ್ಚಳ | ಒಂದು ವಾರ ಕಾದು ನೋಡಿ ಕಠಿಣ ಕ್ರಮ : ಲಾಕ್ ಡೌನ್...

ಕೊರೊನಾ ಹೆಚ್ಚಳ | ಒಂದು ವಾರ ಕಾದು ನೋಡಿ ಕಠಿಣ ಕ್ರಮ : ಲಾಕ್ ಡೌನ್ ಸುಳಿವು ಕೊಟ್ಟ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತೀವ್ರವಾಗಿ ಹರಡುತ್ತಿರುವುದರಿಂದ ಒಂದು ವಾರ ಕಾದು ನೋಡಿ ಕೊರೊನಾ ಪ್ರಕರಣಗಳ ಸಂಖ್ಯೆ ನೋಡಿಕೊಂಡು ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ವಿಧಿಸಿದ್ದೇವೆ. ಜನರು ಸಹಕರಿಸದಿದ್ದರೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗುತ್ತದೆ. ಲಾಕ್​ಡೌನ್ ಮಾಡಿದರೆ ನಾಗರಿಕರಿಗೆ ತೊಂದರೆ ಆಗುತ್ತದೆ. ಲಾಕ್​ಡೌನ್​ನಿಂದ ಆದ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ದಯವಿಟ್ಟು ಸಾರ್ವಜನಿಕರು ಕೊರೊನಾ ಗೈಡ್‌ಲೈನ್ಸ್ ಪಾಲಿಸಿ ಎಂದು ಅವರು ವಿನಂತಿಸಿಕೊಂಡಿದ್ದಾರೆ.

ಲಾಕ್​ಡೌನ್ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕಿಲ್ಲ. ಆದರೆ ಇನ್ನು ಕೆಲ ದಿನ ಕಾದು ನೋಡಿ ಕೊರೊನಾ ನಿಯಂತ್ರಣಕ್ಕೆ ಬಾರದೆ ಇದ್ದರೆ ಸರ್ವಪಕ್ಷ ಸಭೆ ಕರೆದು ಲಾಕ್​ಡೌನ್​ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು . ಲಾಕ್​ಡೌನ್ ಅಗತ್ಯವಿಲ್ಲವೆಂದು ತಜ್ಞರು ಸಲಹೆ ನೀಡಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ವಿಪಕ್ಷದವರು ಯಾವುದೇ ಸಲಹೆ ನೀಡಿದರೂ ಸ್ವೀಕಾರ ಮಾಡ್ತೀವಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Join Whatsapp
Exit mobile version