ಹಣ ನೀಡಲಿಲ್ಲವೆಂದು ಹೆರಿಗೆ ಮಾಡಿಸದೇ ಮಗು ಸಾವು| ಜಿಲ್ಲಾಸ್ಪತ್ರೆಯ ವೈದ್ಯೆ ಅಮಾನತು

Prasthutha|

ಯಾದಗಿರಿ: ಹಣ ನೀಡಲಿಲ್ಲವೆಂದು ಹೆರಿಗೆ ಮಾಡಿಸಲು ತಡಮಾಡಿದ ಹಿನ್ನೆಲೆಯಲ್ಲಿ ಮಗು ಗರ್ಭದಲ್ಲೇ ಸಾವನ್ನಪ್ಪಿದ್ದು, ಜಿಲ್ಲಾಸ್ಪತ್ರೆಯ ವೈದ್ಯೆಯೊಬ್ಬರನ್ನು ಅಮಾನತು ಮಾಡಲಾಗಿದೆ.

- Advertisement -

ಹೆರಿಗೆ ಮಾಡಿಸಲು ಹಣ ಕೇಳಿರುವ ಯಾದಗಿರಿ ಜಿಲ್ಲಾಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆ ಡಾ.ಪಲ್ಲವಿ ಪೂಜಾರಿಯವರನ್ನ ಜಿಲ್ಲಾಧಿಕಾರಿ ಸ್ನೇಹಲ್.ಆರ್​ ಅವರು ಅಮಾನತುಗೊಳಿಸಿದ್ದಾರೆ.

ಗುರುವಾರ(ಮಾ.16) ಹೆರಿಗೆಗಾಗಿ ಸಂಗೀತ ಎಂಬ ಗರ್ಭಿಣಿ ಮಹಿಳೆ ಆಸ್ಪತ್ರೆಗೆ ಆಗಮಿಸಿದ್ದು, ಈ ವೇಳೆ ಸಿಜೇರಿಯನ್ ಮೂಲಕ ಹೆರಿಗೆ ಮಾಡಿಸಲು 10 ಸಾವಿರ ಹಣವನ್ನ ವೈದ್ಯೆ ಡಾ.ಪಲ್ಲವಿ ಪೂಜಾರಿ ಕೇಳಿದ್ದಾರೆ. ಅಷ್ಟೊಂದು ಹಣ ಸಂಗೀತಾ ಬಳಿ ಇರದ ಕಾರಣ, ಬೇರೆ ಕಡೆಯಿಂದ ವಹಿವಾಟು ಮಾಡಿ ಹಣವನ್ನು ತರುವಾಗ ತಡವಾಗಿದೆ. ಅಲ್ಲಿಯವರೆಗೆ ಈ ವೈದ್ಯೆ ಹೆರಿಗೆ ಮಾಡಿಲ್ಲ. ಬಳಿಕ ಹಣ ಕೊಟ್ಟ ಮೇಲೆ ಹೆರಿಗೆ ಮಾಡಿದ್ದಾರೆ. ಆದರೆ ಹೆರಿಗೆಗೆ ತಡವಾಗಿದ ಕಾರಣ ಮಗು ಗರ್ಭದಲ್ಲೇ ಸಾವನ್ನಪ್ಪಿತ್ತು.

- Advertisement -

ಬಳಿಕ ಮಗುವಿನ ಸಾವಿಗೆ ವೈದ್ಯೆಯ ನಿರ್ಲಕ್ಷ್ಯವೇ ಕಾರಣವೆಂದು ಪೋಷಕರು ಜಿಲ್ಲಾಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿ ಅಮಾನತಿಗೆ ಆಗ್ರಹಿಸಿದ್ದರು. ಇದೀಗ ಕರ್ತವ್ಯದಲ್ಲಿ ನಿರ್ಲಕ್ಷ್ಯತನ ಹಾಗೂ ಬೇಜವಾಬ್ದಾರಿತನ ತೋರಿದ್ದಕ್ಕೆ ಜಿಲ್ಲಾಧಿಕಾರಿಯವರು ​ವೈದ್ಯೆಯನ್ನು ಸಸ್ಪೆಂಡ್ ಮಾಡಿದ್ದಾರೆ.

Join Whatsapp