ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಐವರು ನೀರುಪಾಲು

Prasthutha|

ಜೈಪುರ: ದುರ್ಗಾ ಮೂರ್ತಿ ವಿಸರ್ಜನೆಯ ವೇಳೆ ಐದು ಮಂದಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಧೋಲ್ ಪುರದಲ್ಲಿ ನಡೆದಿದೆ.

- Advertisement -

ಮೃತಪಟ್ಟವರೆಲ್ಲರೂ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗ್ನೇರ್ ಪೊಲೀಸ್ ಠಾಣಾ ಪ್ರದೇಶದ ನಿವಾಸಿಗಳಾಗಿದ್ದಾರೆ.

ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡಲು ಐವರು ಆಗ್ರಾದ ಭಾವನಾಪುರ ಗ್ರಾಮದಿಂದ ಧೋಲ್ಪುರಕ್ಕೆ ಬಂದಿದ್ದರು ಎನ್ನಲಾಗಿದೆ. ಶೋಧ ಕಾರ್ಯಾಚರಣೆ ಬಳಿಕ ಆ ಐವರ ಶವಗಳನ್ನು ಹೊರಗೆ ತೆಗೆಯಲಾಗಿದೆ.

Join Whatsapp