Home ಟಾಪ್ ಸುದ್ದಿಗಳು ಕರಗ ಉತ್ಸವ ಸಮಿತಿ ಈ ನೆಲದ ಸೌಹಾರ್ದತೆಯನ್ನು ಎತ್ತಿಹಿಡಿದಿದೆ: ಝಮೀರ್ ಅಹ್ಮದ್ ಖಾನ್ ಮೆಚ್ಚುಗೆ

ಕರಗ ಉತ್ಸವ ಸಮಿತಿ ಈ ನೆಲದ ಸೌಹಾರ್ದತೆಯನ್ನು ಎತ್ತಿಹಿಡಿದಿದೆ: ಝಮೀರ್ ಅಹ್ಮದ್ ಖಾನ್ ಮೆಚ್ಚುಗೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಉತ್ಸವ ಸಮಿತಿ ತೆಗೆದುಕೊಂಡಿರುವ ತೀರ್ಮಾನ ಸ್ವಾಗತಾರ್ಹ. ಸಮಾಜದಲ್ಲಿ ಕಿಡಿಗೇಡಿಗಳ ಒಡೆದು ಆಳುವ ನೀತಿಗೆ ಕಿವಿಗೊಡದೆ, ಸೌಹಾರ್ದತೆ ಮೆರೆಯಲು ಮುಂದಾಗಿರುವುದು ಸಂತಸ ತಂದಿದೆ ಎಂದು ಚಾಮರಾಜಪೇಟೆ ಶಾಸಕ ಬಿ. ಝಡ್ ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿಂದುತ್ವ ಸಂಘಟನೆಗಳಿಂದ ಎಷ್ಟೇ ವಿರೋಧ ವ್ಯಕ್ತವಾದರೂ, ಕರಗ ಉತ್ಸವ ಸಮಿತಿ ಹಿಂದಿನ ರೀತಿ, ನೀತಿಗಳನ್ನು ಪಾಲಿಸುವುದಾಗಿ ತಿಳಿಸಿ, ಈ ನೆಲದ ಸೌಹಾರ್ದತೆಯನ್ನು ಎತ್ತಿಹಿಡಿದಿದೆ. ಐತಿಹಾಸಿಕ ಬೆಂಗಳೂರು ಕರಗದ ಸಂದರ್ಭದಲ್ಲಿ ತಾಯಿಯನ್ನು ದರ್ಗಾಕ್ಕೆ ಕರೆದುಕೊಂಡು ಹೋಗುವುದು ವಾಡಿಕೆ. ಆದರೆ, ಉತ್ಸವದ ವೇಳೆ ಕರಗವು ದರ್ಗಾಗೆ ಪ್ರವೇಶ ಮಾಡಬಾರದು ಎಂದು ಹಿಂದುತ್ವ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದವು. ಆದರೆ ಇವೆಲ್ಲದ್ದಕ್ಕೂ ಡೊಂಟ್ ಕೇರ್ ಎಂದಿರುವ ಕರಗ ಉತ್ಸವ ಸಮಿತಿ ಮುಸ್ಲಿಮರ ಸಹಭಾಗಿತ್ವದಿಂದಲೇ ಕರಗ ಉತ್ಸವ ನಡೆಸುವ ತೀರ್ಮಾನ ಕೈಗೊಂಡಿರುವುದು ಸ್ವಾಗತಾರ್ಹ. ಸಮಿತಿಯ ನಿಲುವಿಗೆ ನನ್ನ ಅಭಿನಂದನೆಗಳು ಎಂದು ಝಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡಿದ್ದಾರೆ.

Join Whatsapp
Exit mobile version