ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ: ಸತೀಶ್​ ಜಾರಕಿಹೊಳಿ

Prasthutha|

- Advertisement -

ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಶೀಘ್ರದಲ್ಲಿಯೇ ಸರ್ಕಾರ ಸೂಕ್ತ ನಿರ್ಣಯ ಕೈಗೊಳ್ಳಲಿದೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದ್ದಾರೆ.

ಗೋಹತ್ಯೆ ಕಾಯ್ದೆಯನ್ನು ನಿಷೇಧ ಮಾಡಿದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮುಂದಿನ ಐದು ವರ್ಷಗಳ ಕಾಲ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ಯಾವ ಕೆಲಸವಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -

ಹೋರಾಟ – ಹೋರಾಟ ಗೆಲ್ಲುವವರೆಗೂ ಹೋರಾಟ ಎಂದು ಬೋರ್ಡ್ ಬರೆಯಿಸಿಕೊಂಡು ಬಿಜೆಪಿಗರು ಹೋರಾಟ ಮಾಡಲಿ ಎಂದು ಹೇಳಿದ್ದಾರೆ.

Join Whatsapp
Exit mobile version