ನವಜಾತ ಶಿಶುವನ್ನು ಬುಟ್ಟಿಯಲ್ಲಿ ಸುತ್ತಿ ದೇವಸ್ಥಾನದ ಮುಂದೆ ಇಟ್ಟು ಹೋದ ಮಹಾತಾಯಿ !

Prasthutha|

ಬೆಂಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ದೇವಾಲಯದ ಮುಂದೆ ಇಟ್ಟು ತಾಯಿ ಪರಾರಿಯಾಗಿರುವ ಘಟನೆ ದೇವನಹಳ್ಳಿಯ ವಿಜಯಪುರ – ಚಿಕ್ಕಬಳ್ಳಾಪುರ ರಸ್ತೆಯಲ್ಲಿ ನಡೆದಿದೆ.

- Advertisement -


ವಿಜಯಪುರ – ಚಿಕ್ಕಬಳ್ಳಾಪುರ ರಸ್ತೆಯ ಕೆರೆಯ ಮೇಲಿರುವ ದುರ್ಗಮ್ಮ ಗುಡಿ ಬಳಿ ರಾತ್ರಿಯಷ್ಟೇ ಹುಟ್ಟಿದ ನವಜಾತ ಹೆಣ್ಣು ಶಿಶುವನ್ನು ಬುಟ್ಟಿಯಲ್ಲಿ ಸುತ್ತಿ ದೇವಿಯ ಮುಂದೆ ಇಟ್ಟು ಹೋಗಿದ್ದಾರೆ.
ಶಿಶು ಅಳುತ್ತಿದ್ದ ಧ್ವನಿ ಕೇಳಿ ಗುಡಿ ಬಳಿಗೆ ಬಂದ ಕೃಷ್ಣಮೂರ್ತಿ ಎನ್ನುವವರು ಮಗುವನ್ನು ರಕ್ಷಣೆ ಮಾಡಿ ವಿಜಯಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.


ಹೆಣ್ಣು ಎಂಬ ಕಾರಣಕ್ಕೆ ಅಥವಾ ಅನೈತಿಕ ಸಂಬಂಧಕ್ಕೆ ಹುಟ್ಟಿದ ಕಾರಣಕ್ಕೆ ಮಹಿಳೆ ಮಗುವನ್ನು ಅಲ್ಲಿ ಬಿಟ್ಟು ಹೋಗಿರಬಹುದು ಎಂದು ಶಂಕಿಸಲಾಗಿದೆ. ವಿಜಯಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Join Whatsapp