Home ಟಾಪ್ ಸುದ್ದಿಗಳು ಬೀಚ್ ನಲ್ಲಿ ಸೆಲ್ಫಿ ತೆಗೆಯಲು ಹೋಗಿ ವ್ಯಕ್ತಿ ಸಮುದ್ರಪಾಲು

ಬೀಚ್ ನಲ್ಲಿ ಸೆಲ್ಫಿ ತೆಗೆಯಲು ಹೋಗಿ ವ್ಯಕ್ತಿ ಸಮುದ್ರಪಾಲು

ಕಾರವಾರ: ಸೆಲ್ಫಿ ತೆಗಿಯಲು ಹೋದ ಯುವಕ ಕಾಲುಜಾರಿ ಬಿದ್ದು ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್‍ನಲ್ಲಿ ನಡೆದಿದೆ.

ಕುಮಾರ್ ಶೇಕಪ್ಪ(35) ಸಮುದ್ರಪಾಲಾದ ವ್ಯಕ್ತಿ

ಕುಮಾರ್ ಶೇಕಪ್ಪ ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿ ಎಂಬ ಮಾಹಿತಿ ತಿಳಿದುಬಂದಿದ್ದು,  ಇಂದು ಮಧ್ಯಾಹ್ನ ಹಾನಗಲ್ ನಿಂದ ಗೋಕರ್ಣಕ್ಕೆ 12 ಜನರೊಂದಿಗೆ ಆಗಮಿಸಿದ್ದ ಅವರು ಓಂ ಬೀಚ್‍ ನ ಬಲಭಾಗದಲ್ಲಿರುವ ಸಮುದ್ರ ತೀರದ ಕಲ್ಲುಬಂಡೆ ಬಳಿ ಸೆಲ್ಫಿ ತೆಗೆದುಕೊಳ್ಳಲು ತೆರಳಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ಕುಮಾರ್ ಶೇಕಪ್ಪ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾರೆ.

ಲೈಫ್ ಗಾರ್ಡ್ ಗಳು ರಕ್ಷಿಸುವ ಪ್ರಯತ್ನ ಮಾಡಿದರಾದರೂ ರಕ್ಷಣೆ ಸಾಧ್ಯವಾಗಿಲ್ಲ. ಈತನ ಶವಕ್ಕಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತಿದ್ದು, ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version