ಪತ್ನಿ ಕೊಲೆಗೈದು ಬ್ಯಾರಲ್‌ನಲ್ಲಿ ಬಚ್ಚಿಟ್ಟಿದ್ದ ಪತಿ ಸೆರೆ

Prasthutha|

ಕಾರವಾರ: ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿ ನೀರು ತುಂಬುವ ಬ್ಯಾರಲ್ ನಲ್ಲಿ ಬಚ್ಚಿಟ್ಟಿರುವ ಕೃತ್ಯ ಉತ್ತರಕನ್ನಡ ಜಿಲ್ಲೆಯ ಹಳಿಯಾಳದ ತೇರಗಾಂವ್‌ನಲ್ಲಿ ನಡೆದಿದೆ.

- Advertisement -

ಶಾಂತಕುಮಾರಿ (33) ಕೊಲೆಯಾದ ಪತ್ನಿ. ತುಕಾರಾಮ್ ಮಡಿವಾಳ್ (38) ಕೊಲೆ ಮಾಡಿದ ಪತಿಯಾಗಿದ್ದಾನೆ.
ತುಕಾರಾಮ ಪರ ಸ್ತ್ರೀಯರೊಂದಿಗೆ ಸಲುಗೆಯಿಂದ ಇರುತ್ತಿರುವುದನ್ನು ಪತ್ನಿ ಶಾಂತಕುಮಾರಿ, ಪ್ರಶ್ನಿಸುತ್ತಿದ್ದಳು. ಈ ವಿಚಾರವಾಗಿ ಗಂಡ ಹೆಂಡತಿಯರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ತಿರುಗಿದಾಗ, ತುಕಾರಾಮ್, ಶಾಂತಕುಮಾರಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಬಳಿಕ ಪತ್ನಿಯ ಶವವನ್ನು ನೀರು ತುಂಬುವ ಬ್ಯಾರಲ್​​ನಲ್ಲಿ ಬಚ್ಚಿಟ್ಟಿದ್ದನು.

ಮನೆ ಖಾಲಿ ಮಾಡುವ ನೆಪದಲ್ಲಿ ಟಾಟಾ ಎಸ್​ ಬಾಡಿಗೆ ಪಡೆದು ಶವ ತುಂಬಿದ ಬ್ಯಾರಲ್​​ ಸಾಗಿಸಿ, ಕಾಡಿನಲ್ಲಿ ಎಸೆದು ಬಂದಿದ್ದಾನೆ.
ಇನ್ನು ದಂಪತಿ ಬಾಡಿಗೆ ಮನೆಯಲ್ಲಿದ್ದು, ತುಕಾರಾಮ್ ಮನೆ ಖಾಲಿ ಮಾಡಿಕೊಂಡು ಹೋಗುತ್ತಿದ್ದನು. ಈ ವೇಳೆ ಗಮನಿಸಿದ ಮನೆಯ ಮಾಲೀಕರು ಎಲ್ಲಿಗೆ ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದ್ದಾರೆ. ಆಗ ತುರ್ತಾಗಿ ಗೋವಾಗೆ ಹೋಗಬೇಕಾಗಿದೆ ಎಂದು ಉತ್ತರಿಸಿದ್ದಾನೆ.
ದಂಪತಿಯ ಜಗಳವನ್ನು ಮನೆ ಮಾಲೀಕರು ತಿಳಿದ ಹಿನ್ನೆಲೆಯಲ್ಲಿ ಹಾಗೂ ಈತನ ಹೇಳಿಕೆಯಿಂದ ಅನುಮಾನಗೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

- Advertisement -

ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪತ್ನಿಯನ್ನು ಕೊಲೆ ಮಾಡಿರುವ ವಿಷಯವನ್ನು ಬಾಯಿ ಬಿಟ್ಟಿದ್ದಾನೆ.
ಆರೋಪಿ ಶಾಂತಾರಾಮ್​​ನನ್ನು ಹಳಿಯಾಳ ಪೋಲಿಸರು ಬಂಧಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp