‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನಿಗೆ Y ಕೆಟಗರಿ ಭದ್ರತೆ !

Prasthutha|

ನವದೆಹಲಿ : ವಿವಾದಾತ್ಮಕ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಎಲ್ಲೆಡೆ ಸದ್ದು ಮಾಡುತ್ತಿದ್ದು. ಜೊತೆಗೆ ವಿವಾದಗಳನ್ನು ಕೂಡ ಸೃಷ್ಟಿ ಮಾಡಿದೆ. ಸಿನಿಮಾ ನಿರ್ದೇಶನ ಮಾಡಿರುವ ವಿವೇಕ್ ಅಗ್ನಿಹೋತ್ರಿ ಅವರ ವಿರುದ್ಧ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಸುಳ್ಳು ಮಾಹಿತಿಗಳನ್ನ ಆಧರಿಸಿ ಕಥಾ ವಸ್ತುವನ್ನು ಈ ಚಿತ್ರದಲ್ಲಿ ನಿರೋಪಿಸಲಾಗಿದೆ.

- Advertisement -

ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಆಧರಿಸಿ ಈ ಸಿನಿಮಾ ತಯಾರಾಗಿದೆ. ಈ ಚಿತ್ರದಲ್ಲಿ ತೋರಿಸಲಾದ ದೃಶ್ಯಗಳ ಬಗ್ಗೆ ಕೆಲವರಿಂದ ತಕರಾರು ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ವೈ ಕೆಟಗರಿ ಭದ್ರತೆ ನೀಡಲಾಗುತ್ತಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಅಭಿಷೇಕ್ ಅಗರ್ವಾಲ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಅನುಪಮ್ ಖೇರ್, ದರ್ಶನ್ ಕುಮಾರ್, ಪಲ್ಲವಿ ಜೋಶಿ, ವಿಥುನ್ ಚಕ್ರವರ್ತಿ, ಪುನೀತ್ ಇಸ್ಸಾರ್, ಪ್ರಕಾಶ್ ಬೆಳವಾಡಿ ಮುಂತಾದ ಬಿಜೆಪಿ ಪರ ನಟರು ಈ ಚಿತ್ರದಲ್ಲಿ ನಟಿಸಿದ್ದಾರೆ.

Join Whatsapp