ಜೂ.1ರಂದು ಸಭೆ ನಡೆಸಲಿರುವ ‘ಇಂಡಿಯಾ’ ನಾಯಕರು

Prasthutha|

ನವದೆಹಲಿ: ಲೋಕಸಭೆ ಚುನಾವಣೆಗೆ ಏಳನೇ ಮತ್ತು ಅಂತಿಮ ಹಂತದ ಮತದಾನ ಜೂನ್ 1ರಂದು ನಡೆಯಲಿದೆ. ಆದೇ ದಿನ ಮಧ್ನಾಹ್ನ ‘ಇಂಡಿಯಾ’ ಮೈತ್ರಿಕೂಟದ ನಾಯಕರು ದೆಹಲಿಯಲ್ಲಿ ಸಭೆ ನಡೆಸುವ ಸಾಧ್ಯತೆ ಇದೆ ಮಾಧ್ಯಮಗಳು ವರದಿ ಮಾಡಿವೆ.

- Advertisement -

ಜೂನ್ 4ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಇದರ ಬೆನ್ನಲ್ಲೇ 7 ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತಾವು ಅನುಸರಿಸಿದ ಕಾರ್ಯತಂತ್ರ ಹಾಗೂ ಕಾರ್ಯಕ್ಷಮತೆ ಬಗ್ಗೆ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರೆ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

Join Whatsapp
Exit mobile version