ಅಪ್ರಾಪ್ತ ಬಾಲಕಿಯ ವಿವಾಹ; ಮೂವರಿಗೆ ಕಠಿಣ ಸಜೆ

Prasthutha|

ಚಾಮರಾಜನಗರ:  ಅಪ್ರಾಪ್ತೆಯನ್ನು ಬಲವಂತದಿಂದ ವಿವಾಹವಾಗಿದ್ದ ಬಸ್ ಕಂಡಕ್ಟರ್ ಹಾಗೂ ಮದುವೆ ಮಾಡಿ ಕೊಟ್ಟ ಇಬ್ಬರು ಅರ್ಚಕರಿಗೆ ಕಠಿಣ ಶಿಕ್ಷೆ ವಿಧಿಸಿ ಮಕ್ಕಳ ಸ್ನೇಹಿ ಹಾಗೂ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

- Advertisement -

ಆರೋಪಿಗಳನ್ನು ಕೆಎಸ್ಆರ್’ಟಿಸಿ ಕಂಡಕ್ಟರ್ ರವಿಕುಮಾರ್, ಅರ್ಚಕರಾದ ಕೆ ಎನ್ ಶಾಸ್ತ್ರಿ ಮತ್ತು ರಾಜೇಶ್ವರ್ ಶಾಸ್ತ್ರಿ ಎಂದು ಗುರುತಿಸಲಾಗಿದೆ.

ಕಾಲೇಜಿಗೆ ತೆರಳುತ್ತಿದ್ದ ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಕಂಡಕ್ಟರ್, 2017 ರ ನವೆಂಬರ್ 23 ರಂದು ಕಾರಿನಲ್ಲಿ ಬಲವಂತವಾಗಿ ಹತ್ತಿಸಿಕೊಂಡು ಶ್ರೀರಂಗಪಟ್ಟಣದಲ್ಲಿ ವಿವಾಹ ಮಾಡಿಕೊಂಡಿದ್ದ. ಈತನಿಗೆ ಇಬ್ಬರು ಅರ್ಚಕರು ಸಹಕಾರ ಕೊಟ್ಟು ವಿವಾಹ ಮಾಡಿಸಿದ್ದರು.

Join Whatsapp